ಲಖನೌ: ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನೋರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳ ಮುಂಭಾಗ ಬೆತ್ತಲೆಯಾಗಿ ಮಲಗಿರುವ ಘಟನೆ ಉತ್ತರಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಪ್ರಕರಣ ಸಂಬಂಧ ಆತನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಮಾನತಾದ ಶಿಕ್ಷಕ ದುರ್ಗಾ ಪ್ರಸಾದ್ ಜೈಸ್ವಾಲ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ; ಹೆದ್ದಾರಿ ಯೋಜನೆಗಳ ಕುರಿತು ಸುದೀರ್ಘ ಚರ್ಚೆ
ಈ ಕುರಿತು ಪ್ರತಿಕ್ರಿಯಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವ್ಯಕ್ತ್ ರಾಮ್ ತಿವಾರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದ ಸತ್ಯಾಸತ್ಯತೆಯನ್ನು ಅರಿಯಬೇಕಿದೆ. ಅಮಾನತಾದ ಶಿಕ್ಷಕ ದುರ್ಗಾ ಪ್ರಸಾದ್ ವಿದ್ಯಾರ್ಥಿಗಳ ಮುಂಭಾಗ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ಸ್ಥಳೀಯರು ಹಾಗೂ ಪೋಷಕರು ದೂರು ನೀಡಿದ್ದರು.
ಶಿಕ್ಷಕನ ವರ್ತನೆಯಿಂದ ಅನೇಕ ವಿದ್ಯಾರ್ಥಿನಿಯರು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ ಎಂದು ಹಲವರು ದೂರಿದ್ದರು. ಈ ಸಂಬಂಧ ತನಿಖೆಗೆ ಆದೇಶಿಸಲಾಗಿತ್ತು. ತನಿಖಾ ವರದಿಯ ಆಧಾರದ ಮೇಲೆ ದುರ್ಗಾ ಪ್ರಸಾದ್ನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅವ್ಯಕ್ತ್ ರಾಮ್ ತಿವಾರಿ ತಿಳಿಸಿದ್ದಾರೆ.