ಡೆಹ್ರಾಡೂನ್: ಕುಡಿದ ಮತ್ತಿನಲ್ಲಿ ಯುವಕನೊಬ್ಬ ವೈರಲ್ ವಿಡಿಯೋ ಮಾಡುವ ಗೀಳಿಗೆ ಹೋಗಿ ಪೇಚಿಗೆ ಸಿಲುಕಿರುವ ಘಟನೆ ಉತ್ತರಾಖಂಡದ ಋಷಿಕೇಷದಲ್ಲಿ ನಡೆದಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಾನಮತ್ತನಾಗಿದ್ದ ವೇಳೆ ಕೃತ್ಯ
ಈ ಕುರಿತು ಟ್ವೀಟ್ ಮಾಡಿರುವ ಉತ್ತರಾಖಂಡ ಪೊಲೀಸರು ಮೇ 05ರಂದು ಋಉಷಿಕೇಶದ ತಪೋವನದಲ್ಲಿ ಯುವಕನೋರ್ವ ಪಾನಮತ್ತನಾಗಿದ್ದ ವೇಳೆ ಗೂಳಿಯ ಮೇಲೆ ಸವಾರಿ ಮಾಡುತ್ತಿರುವುದು ಕಂಡು ಬಂದಿದೆ.
ಇದನ್ನೂ ಓದಿ: EPFO ಅಧಿಕಾರಿ ಸೋಗಿನಲ್ಲಿ ಶಿಕ್ಷಕಿಯಿಂದ 80,000 ಸಾವಿರ ರೂ. ದೋಚಿದ ಖದೀಮ!
ಇನ್ನು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಹಾಗೂ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಯುವಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಲಾಗಿದೆ ಎಂದು ಉ್ತತರಾಖಂಡ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಇನ್ನು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಯರಲ್ ಆಗಿತ್ತು ಮತ್ತು ಅನೇಕ ಪೇಜ್ಗಳಲ್ಲಿ ಮೀಮ್ಗಳಾಗಿ ಉಪಯೋಗಿಸಲಾಗಿತ್ತು.
ವಿಡಿಯೋ ಕುರಿತು ಕಿಡಿಕಾರಿದ್ದೆ ನೆಟ್ಟಿಗರು ಪ್ರಾಣಿಗಳಿಗೆ ಹಿಂಸೆ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು.