ಉತ್ತರಕನ್ನಡ: ನೌಕಾಸೇನೆಯ ಸಿಬ್ಬಂದಿಯೊಬ್ಬ ಪಾನಮತ್ತನಾಗಿ ಸಾರಿಗೆ ಸಂಸ್ಥೆಯ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿ ಎಂಬಲ್ಲಿ ಈ ಘಟನೆ ನಡೆದಿದೆ.
ನೌಕಾಸೇನೆಯ ಸಿಬ್ಬಂದಿ ಎನ್ನಲಾದ ಈ ವ್ಯಕ್ತಿ ಹಟ್ಟಿಕೇರಿ ಟೋಲ್ ಗೇಟ್ ಬಳಿ ಸರ್ಕಾರಿ ಬಸ್ ನಿಲ್ಲಿಸಿ ಪುಂಡಾಟ ನಡೆಸಿದ್ದಾನೆ. ಅಲ್ಲದೆ ಬಸ್ ಕೀ ಕಸಿದು ಸಾರಿಗೆ ಸಂಸ್ಥೆ ಬಸ್ ಚಾಲಕನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ.
ಸಾರ್ವಜನಿಕ ಸ್ಥಳದಲ್ಲಿ ಅತಿರೇಕದಿಂದ ವರ್ತಿಸಿದ ಈ ವ್ಯಕ್ತಿಯನ್ನು ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರೆಲ್ಲ ಸೇರಿ ಒಂದಾಗಿ ಗದರಿಸಿ ಓಡಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಯಾರು, ಎಲ್ಲಿಯವ ಎಂಬಿತ್ಯಾದಿ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.
ಪತಿ ವಯಸ್ಸು 75, ಪತ್ನಿಗೆ 70; ಮದ್ವೆಯಾದ 54 ವರ್ಷಗಳ ಬಳಿಕ ಆಯ್ತು ಮೊದಲ ಮಗು!
ದೇವಸ್ಥಾನದ ನೀರಲ್ಲೇ ಉರಿಯುತ್ತದೆ ಈ ದರ್ಗಾದ ದೀಪ!; ಹಿಂದೂ-ಮುಸ್ಲಿಂ ಸಾಮರಸ್ಯದ ಮೊಹರಂ..