More

    ಮೈತ್ರಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ: ದಸಂಸ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ನರೋಣಾ ಮನವಿ

    ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನ ಬದಲಿಸಲು ಹೊರಟಿರುವ ಮೈತ್ರಿ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ನರೋಣಾ ಮನವಿ ಮಾಡಿದರು.
    ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ ವರ್ಗಗಳ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುವ ವಿಶೇಷವಾಗಿ ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿ ಮಾಡುವುದರ ಮುಖಾಂತರ ರಾಜ್ಯದಲ್ಲಿ ಯಾರು ಹಸಿವಿನಿಂದ ಇರಬಾರದೆಂದು ಮತ್ತು ಪ್ರತಿ ಬಡ ಕುಟುಂಬ ಆರ್ಥಿಕತೆಯಿಂದ ಸದೃಢತೆ ಮಾಡಲು ಪಣತೊಟ್ಟು ಜಾರಿ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ವೈಖರಿ ಹೆಮ್ಮೆ ಎನಿಸಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಶ್ಲಾಸಿದರು.
    2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕೆಟ್ಟ ರೀತಿಯಲ್ಲಿ ಸೋಲಿಸಲಾಗಿತ್ತು. ಇದು ಭರವಸೆ ಹುಟ್ಟಿಸಿದೆ. ಲೋಕಸಭೆಯಲ್ಲಿರುವ ಬಹುಮತವನ್ನು ಬಳಸಿಕೊಂಡು ನಿರಂಕುಶ ಸರ್ವಾಧಿಕಾರದತ್ತ ಸಾಗಿರುವ ಕೇಂದ್ರ ಸರ್ಕಾರ ಐಟಿ, ಇಡಿ, ಸಿಬಿಐ ಸಂಸ್ಥೆಗಳನ್ನು ಹಂತಹಂತವಾಗಿ ನಿಷ್ಕ್ರೀಯಗೊಳಿಸಲು ಹೊರಟಿದೆ ಎಂದು ಆರೋಪಿಸಿದರು.
    ಮುಖಂಡರಾದ ವಿಜಯಪುರ ವೈ.ಸಿ.ಮಯೂರ, ಮಲ್ಲೇಶ್ ಚುಂಚನಹಳ್ಳಿ, ಎಂ.ವಿ.ಕೃಷ್ಣ, ಕೆ.ಜಿ.ಶಿವಮೂರ್ತಿ, ಸ್ವಾಮಿ ಹೊಸೂರು, ಸಂತೋಷ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts