ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಡಬಲ್​ ಮರ್ಡರ್​: ಬೆಚ್ಚಿಬಿದ್ದ ಧಾರವಾಡದ ಜನತೆ

ಧಾರವಾಡ: ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆಯಾಗಿರುವ ಆಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದ್ದು, ಭೀಕರ ಹತ್ಯೆಯಿಂದಾಗಿ ವಿದ್ಯಾಕಾಶಿ ಜನತೆ ಭಯಭೀತರಾಗಿದ್ದಾರೆ. ಮಹಮ್ಮದ್​ ಕುಡಚಿ, ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಆತನ ಮನೆ ಎದುರೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಮ್ಮದ್​ ಕುಡಚಿ ಮನೆಯ ಮುಂದೆ ಕುಳಿತಿದ್ದರು ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಬರ್ಬರವಾಗಿ ಹತ್ಯೆಗೈದಿದೆ. ಕುಡಚಿ ನಿವಾಸದ ಅನತಿ ದೂರದಲ್ಲೇ ಮತ್ತೊಂದು ಶವ ಪತ್ತೆಯಾಗಿದೆ. … Continue reading ರಿಯಲ್​ ಎಸ್ಟೇಟ್​ ಉದ್ಯಮಿ ಸೇರಿ ಡಬಲ್​ ಮರ್ಡರ್​: ಬೆಚ್ಚಿಬಿದ್ದ ಧಾರವಾಡದ ಜನತೆ