More

    ಗುಂಪು ಘರ್ಷಣೆಯಿಂದ ಶುರುವಾದ ಗಲಾಟೆ ಐವರ ಕೊಲೆಯಲ್ಲಿ ಅಂತ್ಯ

    ಜೈಪುರ: ಎರಡು ಗುಂಪುಗಳ ನಡುವಿನ ಘರ್ಷಣೆ ಐದು ಮಂದಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಜಸ್ಥಾನದ ಜಲಾವರ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

    ಮೃತರನ್ನು ಗೋವರ್ಧನ್ ಸಿಂಗ್, ಧೀರಜ್ ಸಿಂಗ್, ಭರತ್ ಸಿಂಗ್, ತೂಫಾನ್ ಸಿಂಗ್ ಮತ್ತು ಬಾಲು ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ತಲೆಮಾರಿಸಿಕೊಂಡಿದ್ದು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ ‘ಧಮ್’ ಹೊಡೆದ ಶಾರುಖ್​ ಖಾನ್​; ವಿಡಿಯೋ ವೈರಲ್​

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜಲಾವರ್​ನ ಪಗಾರಿಯಾ ಪೊಲೀಸ್​ ಠಾಣೆ ವ್ಯಾಪ್ತಿಯ ವಿನಾಯಕ ಗ್ರಾಮದಲ್ಲಿ ಶನಿವಾರ ತಡರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಎದುರಾಳಿ ತಂಡದ ಸದಸ್ಯರು ಘರ್ಷಣೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಪೊಲೀಸ್​ ಠಾಣೆಗೆ ಹೊರಟರು. ಈ ವೇಳೆ ಕುಪಿತಗೊಂಡ ಆರೋಪಿಗಳು ಅವರ ಮೇಲೆ ಟಿಪ್ಪರ್​ ಹತ್ತಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

    ಘಟನೆ ನಡೆದ ಬಳಿಕ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಇವರ ಪತ್ತೆಗಾಗಿ ಪೊಲೀಸ್​ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts