ಬೆಂಗಳೂರು: ತೆಲುಗಿನ ‘ವೀರ ಸಿಂಹ ರೆಡ್ಡಿ’ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಟಾಲಿವುಡ್ ಪ್ರವೇಶಿಸಿದ್ದ ‘ದುನಿಯಾ’ ವಿಜಯ್, ಆ ಚಿತ್ರದ ಯಶಸ್ಸಿನಿಂದ ಫುಲ್ ಖುಷಿಯಾಗಿದ್ದಾರೆ. ಆ ಖುಷಿಯಲ್ಲಿಯೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಕ್ಕೆ ಸಜ್ಜಾಗುತ್ತಿದ್ದಾರೆ.
ಇದನ್ನೂ ಓದಿ: ಸ್ಯಾಂಡಲ್ವುಡ್ ನಟ ಧನುಷ್ ನಿಧನ; ಇಂದು ಅಂತ್ಯಕ್ರಿಯೆ
ನಾಳೆ (ಜ. 20) ‘ದುನಿಯಾ’ ವಿಜಯ್ ಅವರ ಹುಟ್ಟುಹಬ್ಬ. ಈ ಹುಟ್ಟುಹಬ್ಬವನ್ನು ಅವರು ತಮ್ಮ ತಂದೆ-ತಾಯಿಯ ಸಮಾಧಿ ಬಳಿ ಆಚರಿಸಿಕೊಳ್ಳುತ್ತಿದ್ದಾರೆ.
ವಿಜಯ್ ಅವರ ತಾಯಿ ಕಳೆದ ವರ್ಷ ನಿಧನರಾಗಿದ್ದರು. ಅದಾದ ಕೆಲವೇ ದಿನಗಳಲ್ಲಿ ಅವರ ತಂದೆಯೂ ಇನ್ನಿಲ್ಲವಾಗಿದ್ದರು. ಅಪ್ಪ-ಅಮ್ಮನ ಅಂತ್ಯಕ್ರಿಯೆಯನ್ನು ವಿಜಯ್, ತಮ್ಮ ಹುಟ್ಟೂರಾದ ಆನೇಕಲ್ನ ಕುಂಬಾರನಹಳ್ಳಿಯಲ್ಲಿ ನೆರವೇರಿಸಿದ್ದರು. ಅಷ್ಟೇ ಅಲ್ಲ, ಅಲ್ಲೇ ಸಮಾಧಿಯನ್ನೂ ಕಟ್ಟಿಸಿದ್ದರು. ಆ ಸಮಾಧಿಯ ಎದುರೇ ವಿಜಯ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಹುಟ್ಟುಹಬ್ಬ ಇರುವುದು ನಾಳೆಯಾದರೂ, ಇಂದೇ ವಿಜಯ್ ತಮ್ಮ ಹುಟ್ಟೂರಿನಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲಿ ತಮ್ಮ ತಂದೆ-ತಾಯಯ ಸಮಾಧಿ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬದ ಆಚರಣೆಗಳು ನಡೆಯುತ್ತಿವೆ.
ಇದನ್ನೂ ಓದಿ: ಬಾಲಿವುಡ್ ನಟಿ ರಾಖಿ ಸಾವಂತ್ ಬಂಧನ; ಯಾಕೆ ಗೊತ್ತಾ?
ಅಂದಹಾಗೆ, ವಿಜಯ್ ಸದ್ಯ ‘ಭೀಮ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಅರ್ಧ ಆಗಿದ್ದು, ಸದ್ಯದಲ್ಲೇ ಇನ್ನೊಂದು ಹಂತದ ಚಿತ್ರೀಕರಣ ನಡೆಯಲಿದೆ.
ಬಾಬುಗೆ ಕೋರ್ಟ್ನಲ್ಲಿ ಜಯ; ‘ಸ್ವಾತಿಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ರಮ್ಯಾ ಬಳಸುವಂತಿಲ್ಲ!