More

    ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ; ದ್ವಿಚಕ್ರ ವಾಹನ ಸವಾರ ಸಾವು

    ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪ್ರಚಾರದ ವೇಳೆ ಕಾರಿನ ಬಾಗಿಲು ತಾಗಿ ಕೆಳಗೆ ಬಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಖಾಸಗಿ ಬಸ್ ಹರಿದು ಮೃತಪಟ್ಟಿದ್ದಾರೆ.

    ಕೆ.ಆರ್.ಪುರದ ಟಿ.ಸಿ. ಪಾಳ್ಯದ ಪ್ರಕಾಶ್ (62) ಮೃತ. ಕಟ್ಟೆ ವಿನಾಯಕ ದೇವಸ್ಥಾನದ ಬಳಿ ಬೆಳಗ್ಗೆ 11.30ರಲ್ಲಿ ಫಾರ್ಚೂನರ್ ಕಾರಿನಲ್ಲಿ ಬಂದ ಶೋಭಾ, ಇಳಿದು ಸ್ಥಳೀಯ ಮುಖಂಡರ ಜತೆಗೆ ದೇವಸ್ಥಾನಕ್ಕೆ ಪೂಜೆಗೆ ಹೋಗಿದ್ದರು. ಕಾರು ಚಾಲಕ ಏಕಾಏಕಿ ಡೋರ್ ತೆಗೆದಾಗ, ಅದು ಪಕ್ಷದ ಕಾರ್ಯಕರ್ತ ಪ್ರಕಾಶ್ ಇದ್ದ ದ್ವಿಚಕ್ರ ವಾಹನಕ್ಕೆ ತಾಗಿ ಬಿದ್ದರು.

    ಆ ವೇಳೆ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ಸವಾರನ ಮೇಲೆ ಹರಿಯಿತು. ತೀವ್ರ ಗಾಯಗೊಂಡಿದ್ದ ಪ್ರಕಾಶ್‌ನನ್ನು ಬಿಜೆಪಿ ಕಾರ್ಯಕರ್ತರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಲಿಸದೆ ಅಸುನೀಗಿದ್ದಾರೆ.
    ಈ ಸಂಬಂಧ ಕೆ.ಆರ್. ಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ಕಾರು ಮತ್ತು ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ವಿಷಯ ತಿಳಿದ ಶೋಭಾ ಕರಂದ್ಲಾಜೆ ಮತ್ತು ಶಾಸಕ ಬೈರತಿ ಬಸವರಾಜ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟು ಪ್ರಕಾಶ್ ಅಂತಿಮ ದರ್ಶನ ಪಡೆದರು.

    ಪಕ್ಷದಿಂದ ನೆರವು

    ಆಕಸ್ಮಿಕವಾಗಿ ಸಂಭವಿಸಿದ ಅಪಘಾತದಲ್ಲಿ ನಿಷ್ಠಾವಂತ ಕಾರ್ಯಕರ್ತ ಪ್ರಕಾಶ್ ಮೃತಪಟ್ಟಿದ್ದಾರೆ. ಇದರಿಂದ ತುಂಬ ನೋವಾಗಿದೆ. ಅವರ ಕುಟುಂಬದ ಜತೆ ನಾವಿದ್ದೇವೆ. ನಮ್ಮ ಪಕ್ಷದ ವತಿಯಿಂದ ಎಲ್ಲ ಸವಲತ್ತುಗಳನ್ನು ಮತ್ತು ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶೋಭಾ ಕರಂದ್ಲಾಜೆ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts