More

    ಬಾಳೆಹೊನ್ನೂರು ಗ್ರಾಪಂ ಆಡಳಿತಾಧಿಕಾರಿ ವಿರುದ್ಧ ದೂರು

    ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂನಲ್ಲಿ ಆರು ತಿಂಗಳಿನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಎನ್.ಆರ್.ಪುರ ತಾಪಂ ಉಪಾಧ್ಯಕ್ಷ ಹೊಳೆಬಾಗಿಲು ಮಂಜು ಅಸಮಾಧಾನ ವ್ಯಕ್ತಪಡಿಸಿದರು.

    ಗ್ರಾಪಂಗೆ ಮಂಗಳವಾರ ತಾಪಂ ಇಒ ನಯನಾ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಪಂನಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ಗಮನಕ್ಕೆ ತಂದು, ಗ್ರಾಪಂಗೆ ಆಡಳಿತಾಧಿಕಾರಿ ಸತೀಶ್ ನೇಮಕಗೊಂಡ ಬಳಿಕ ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.

    ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಆಡಳಿತಾಧಿಕಾರಿ ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಸಮಸ್ಯೆಗಳ ಕುರಿತು ತಿಳಿಸಲು ಕರೆ ಮಾಡಿದರೆ ಸಂಪರ್ಕಕ್ಕೆ ಸಿಗುವುದಿಲ್ಲ. ಗ್ರಾಪಂನಲ್ಲಿ ಬೀದಿ ದೀಪ ನಿರ್ವಹಣೆ ಸೇರಿದಂತೆ ವಿವಿಧ ಟೆಂಡರ್ ಪಡೆದವರ ಹಣವನ್ನು ಇನ್ನೂ ಪಾವತಿಸದಿರುವುದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts