More

    ಮಳೆ ನಿಂತ ಬೆನ್ನಲ್ಲೇ ಭೂಕಂಪನ! ಭಯ ಬಿದ್ದು ಮನೆಯಿಂದ ಹೊರಗೆ ಓಡಿಬಂದ ಗ್ರಾಮಸ್ಥರು

    ವಿಜಯಪುರ: ಗಂಟೆಯ ಕಾಲ ಮಳೆ ಸುರಿದು ನಿಂತ ಬೆನ್ನಲ್ಲೇ ಭೂಮಿ ಕಂಪಿಸಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜನರೆಲ್ಲರೂ ಭಯ ಭೀತರಾಗಿದ್ದು, ಮನೆಯಿಂದ ಹೊರಗೆ ಓಡಿ ಬಂದಿರುವುದಾಗಿ ಹೇಳಲಾಗಿದೆ.

    ಉಕ್ಕಲಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಸುಮಾರು ಒಂದು ಗಂಟೆಗಿಂತ ಹೆಚ್ಚು ಕಾಲ ಮಳೆಯಾಗಿದೆ. ಸಂಜೆ 5 ಗಂಟೆಯ ಹೊತ್ತಿಗೆ ಮಳೆ ನಿಂತಿದ್ದು, ಒಮ್ಮೆಲೆ ಭೂಮಿ ಕಂಪಿಸಿದೆ. ಗ್ರಾಮಸ್ಥರೆಲ್ಲರಿಗೂ ಭೂಕಂಪನದ ಅನುಭವವಾಗಿದ್ದು, ಭಯದಿಂದ ಮನೆಯ ಹೊರಗೆ ಓಡಿ ಬಂದಿದ್ದಾರೆ.

    ಗ್ರಾಮದಲ್ಲಿ ಈ ಹಿಂದೆಯೂ ಕೂಡ ಆಗಾಗ ಭೂಮಿ ಕಂಪಿಸಿದ ಅನುಭವ ಆಗುತ್ತಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ. ಕಳೆದ ತಿಂಗಳು ಸಹ ಬಸವನ ಬಾಗೇವಾಡಿ ತಾಲೂಕಿನ ವಿವಿಧೆಡೆ ಲಘು ಭೂಕಂಪನದ ಅನುಭವವಾಗಿದ್ದು, ಜನರು ಆತಂಕ‌ಕ್ಕೆ ಈಡಾಗಿದ್ದರು.

    ನವದೆಹಲಿಯಲ್ಲಿ ಲಾಕ್​ಡೌನ್​ ಸಡಿಲಿಕೆ; ಸರಿ-ಬೆಸ ನಿಯಮ ಜಾರಿ

    ಮಗನ ಕಷ್ಟ ನೋಡಲಾಗುತ್ತಿಲ್ಲ, ದಯಾಮರಣ ಕೊಡಿ ಎಂದು ಅರ್ಜಿ ಸಲ್ಲಿಸಿದ ಎರಡೇ ಗಂಟೆಗಳಲ್ಲಿ ಮಡಿಲಲ್ಲೇ ಪ್ರಾಣ ಬಿಟ್ಟ ಮಗ

    ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

    17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts