More

    ಉಪಚುನಾವಣೆ ಮುಂದೂಡಿದ ಚುನಾವಣಾ ಆಯೋಗ

    ನವದೆಹಲಿ : ಕರೊನಾ ನಡುವೆ ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಸಿದ್ದಕ್ಕೆ ಟೀಕೆಗಳಿಗೆ ಗುರಿಯಾದ ಬೆನ್ನಲ್ಲೇ, ಚುನಾವಣಾ ಆಯೋಗವು ಮುಂದಿನ ಸುತ್ತಿನ ಚುನಾವಣೆಗಳನ್ನು ಮುಂದೂಡಿದೆ. ದೇಶದ ವಿವಿಧೆಡೆಯ 3 ಲೋಕಸಭಾ ಕ್ಷೇತ್ರಗಳಿಗೆ ಮತ್ತು 8 ವಿಧಾನಸಭಾ ಕ್ಷೇತ್ರಗಳಿಗೆ ನಡೆಸಬೇಕಾದ ಉಪಚುನಾವಣೆಗಳನ್ನು ಕರೊನಾ ಹಿನ್ನೆಲೆಯಲ್ಲಿ ಸದ್ಯಕ್ಕೆ ನಡೆಸುವುದಿಲ್ಲ ಎಂದಿದೆ.

    ದಾದರ್ ಮತ್ತು ನಗರ್​ ಹವೇಲಿ, ಮಧ್ಯಪ್ರದೇಶದ ಖಾಂಡ್ವ ಮತ್ತು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ವಿವಿಧ ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. “ಸಾಂಕ್ರಾಮಿಕದ ಪರಿಸ್ಥಿತಿಯು ಸುಧಾರಿಸುವವರೆಗೆ ಉಪಚುನಾವಣೆಗಳನ್ನು ನಡೆಸುವುದು ಸೂಕ್ತವಲ್ಲ ಎಂದು ನಿರ್ಧರಿಸಲಾಗಿದೆ” ಎಂದು ಆಯೋಗ ಪತ್ರಿಕಾ ಹೇಳಿಕೆ ನೀಡಿದೆ. (ಏಜೆನ್ಸೀಸ್)

    ಒಂದೇ ದಿನದಲ್ಲಿ 50 ಸಾವಿರ ದಾಟಿದ ಕರೊನಾ ಪ್ರಕರಣ ! ಸಂಭವಿಸಿವೆ 346 ಸಾವುಗಳು

    ಇನ್ನೂ ಬರಲಿದೆಯಂತೆ ಕರೊನಾ 3ನೇ ಅಲೆ ! ಸರ್ಕಾರದ ವೈಜ್ಞಾನಿಕ ಸಲಹೆಗಾರರ ಎಚ್ಚರಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts