ವೈಜ್ಞಾನಿಕ ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ

nss

ಶಿವಮೊಗ್ಗ: ರೈತರು ವೈಜ್ಞಾನಿಕ ಹೈನುಗಾರಿಕೆ ಪದ್ಧತಿ ಅಳವಡಿಸಿಕೊಂಡರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಹಾಗೂ ತೋಟಗಾರಿಕೆ ವಿವಿ ವಿದ್ಯಾರ್ಥಿ ಕಲ್ಯಾಣ ಡೀನ ಡಾ.ನಾರಾಯಣ ಎಸ್.ಮಾವರ್ಕರ್ ಹೇಳಿದರು.
ಶಿಕಾರಿಪುರ ತಾಲೂಕು ನೆಲವಾಗಿಲು ಗ್ರಾಮದಲ್ಲಿ ವಿವಿಯಿಂದ ನಡೆಯುತ್ತಿರುವ ಎನ್‌ಎಸ್‌ಎಸ್ ಶಿಬಿರದಲ್ಲಿ ಸೋಮವಾರ ಜಾನುವಾರು ರೋಗಗಳಿಗೆ ಮನೆಮದ್ದು ಹಾಗೂ ವೈಜ್ಞಾನಿಕ ಹೈನುಗಾರಿಕೆ ನಿರ್ವಹಣಾ ಕ್ರಮಗಳು ಎಂಬ ವಿಷಯದ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಹೈನುಗಾರಿಕೆಯತ್ತ ಬರಬೇಕು ಎಂದರು.
ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ರವಿಕುಮಾರ್, ಜಾನುವಾರುಗಳಿಗೆ ಎದುರಾಗುವ ರೋಗಗಳಿಗೆ ಮನೆಮದ್ದುಗಳನ್ನು ತಯಾರಿಸುವ ಬಗ್ಗೆ ರೈತರಿಗೆ ಪ್ರಾಯೋಗಿಕವಾಗಿ ವಿವರಿಸಿದರು. ಮನೆಮದ್ದಿನಿಂದ ಉತ್ಪಾದನಾ ವೆಚ್ಚ ಕಡಿಮೆ ಮಾಡಿಕೊಂಡು ಹೆಚ್ಚಿನ ಆದಾಯ ಪಡೆಯಬಹುದೆಂದು ತಿಳಿಸಿದರು.
ಜನರಲ್ಲಿ ಹೈನುಗಾರಿಕೆ ಕುರಿತು ಜಾಗೃತಿ ಮೂಡಿಸಲು 50ಕ್ಕೂ ಅಧಿಕ ರಾಸುಗಳೊಂದಿಗೆ ಜಾಥಾ ನಡೆಸಲಾಯಿತು. ಎನ್‌ಎಸ್‌ಎಸ್ ಸಂಯೋಜಕ ಡಾ.ನಂದೀಶ್, ಯುವ ರೈತ ಪ್ರವೀಣ್, ವಿಜ್ಞಾನಿಗಳಾದ ಡಾ.ಅಶೋಕ್, ಡಾ.ಅರುಣ್‌ಕುಮಾರ್ ಮುಂತಾದವರಿದ್ದರು.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…