ಗುಡಿ ಕೈಗಾರಿಕೆಗೆ ಆರ್ಥಿಕ ಬಲ

ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಗ್ರಾಪಂ ಅಧ್ಯಕ್ಷ ಎನ್.ಕೃಷ್ಣ ವೃದ್ದರಿಗೆ ಮಾಸಶನ ವಿತರಿಸಿದರು. ಗುಡೇಕೋಟೆ ವಲಯ ಮೇಲ್ವಿಚಾರಕರಾದ ಉಮೇಶ್, ಕರಿಯಪ್ಪ, ಸೇವಾ ಪ್ರತಿನಿಧಿಗಳಾದ ಸುನೀತಾ, ನೇತ್ರಾವತಿ, ಕವಿತಾ, ಲಕ್ಷ್ಮೀ, ನವೀನ್ ತಾಜ್ ಇದ್ದರು.

ಕೂಡ್ಲಿಗಿ: ಅನಕ್ಷರಸ್ಥರಿಗೆ ಅಕ್ಷರದ ಅರಿವು ಹಾಗೂ ವಿಶೇಷ ಚೇತನರ, ನಿರ್ಗತಿಕರ, ಮಹಿಳೆಯರ ಬದುಕು ಹಸನಾಗಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಗ್ರಾಪಂ ಅಧ್ಯಕ್ಷ ಎನ್.ಕೃಷ್ಣ ತಿಳಿಸಿದರು.

ಇದನ್ನೂ ಓದಿ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ

ತಾಲೂಕಿನ ಗುಡೇಕೋಟೆ ಗ್ರಾಮದ ಚಿನ್ನಕ್ಕ ಮತ್ತು ಹೊನ್ನೂರಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಸ್ಥೆಯಿಂದ ಭಾನುವಾರ ಮಾಸಾಶನ ವಿತರಿಸಿ ಮಾತನಾಡಿದರು. ರಾಜ್ಯದ ಸಾವಿರಾರು ನಿರ್ಗತಕರಿಗೆ ಮಾಶಾಸನ, ಬಡ ವಿದ್ಯಾರ್ಥಿಗಳಿಗೆ ಶಿಶ್ಯವೇತನ ವಿತರಿಸುವ ಜತೆಗೆ ದೇವಸ್ಥಾನ, ಶ್ರದ್ಧಾ ಕೇಂದ್ರ, ಕೆರೆಗಳ ಪುನಶ್ಚೇತನಕ್ಕೆ ಸಂಘ ಒತ್ತುಕೋಟ್ಟಿದೆ. ಪರಂಪರೆ ಉಳಿಸಿ ಬೆಳೆಸು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಾಕಾರಿಯಾಗಿವೆ. ಇದರಿಂದ ಗುಡಿ ಕೈಗಾರಿಕೆ, ಸಣ್ಣಪುಟ್ಟ ವ್ಯವಹಾರ ನಡೆಸುವವರಿಗೆ ಆರ್ಥಿಕ ಬಲ ದೊರೆತಿದೆ. ಕೃಷಿಕರಿಗೆ ಪೂರಕ ತಂತ್ರಜ್ಞಾನ ಆಧಾರಿತ ಯಂತ್ರಗಳನ್ನು ವಿತರಿಸಲಾಗಿದೆ ಎಂದರು.
ಗುಡೇಕೋಟೆ ವಲಯ ಮೇಲ್ವಿಚಾರಕರಾದ ಉಮೇಶ್, ಕರಿಯಪ್ಪ, ಸೇವಾ ಪ್ರತಿನಿಧಿ ಸುನೀತಾ, ಪ್ರಮುಖರಾದ ಮಹೇಶ್,ನೇತ್ರಾವತಿ, ಕವಿತಾ, ಲಕ್ಷ್ಮೀ, ನವೀನ್ ತಾಜ್ ಇತರರಿದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…