ಮುಂಬೈ: ಯೆಸ್ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ರನ್ನು ವಿಚಾರಣೆಗಾಗಿ ಶನಿವಾರ ಬೆಳಗ್ಗೆ ಮುಂಬೈ ಕಚೇರಿಗೆ ಕರೆದೊಯ್ದಿದ್ದ ಇಡಿ ಅಧಿಕಾರಿಗಳು ಭಾನುವಾರ ಮುಂಜಾನೆ ಬಂಧಿಸಿದ್ದಾರೆ.
ಬ್ಯಾಂಕ್ನ ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣದ ಬಗ್ಗೆ ಅವರನ್ನು ವಿಚಾರಣೆ ನಡೆಸಿದರೂ ರಾಣಾ ಕಪೂರ್ ಅವರು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲದ ಕಾರಣ ಇ.ಡಿ.ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಣಾ ಕಪೂರ್ ಅವರನ್ನು ಇಂದು ಸ್ಥಳೀಯ ನ್ಯಾಯಾಲಯದ ಎದುರು ಹಾಜರು ಪಡಿಸಲಾಗುವುದು ಎನ್ನಲಾಗಿದೆ.
ಯೆಸ್ ಬ್ಯಾಂಕ್ ದಿವಾಳಿ ಹಿನ್ನೆಲೆಯಲ್ಲಿ ಆರ್ಬಿಐ ಮಧ್ಯಪ್ರವೇಶ ಮಾಡಿ, ಅಲ್ಲಿನ ಆಡಳಿತ ಮಂಡಳಿಯನ್ನು ವಜಾಗೊಳಿಸಿತ್ತು. ಶುಕ್ರವಾರ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮನೆ ಮೇಲೆ ಇ.ಡಿ. ದಾಳಿ ನಡೆಸಿತ್ತು.
ಇದನ್ನೂ ಓದಿ: ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಗ್ರಾಹಕರಿಗೆ ಬಿಗ್ ರಿಲೀಫ್ ನೀಡಿದ ಆರ್ಬಿಐ, ಕೇಂದ್ರ ಸರ್ಕಾರ
ಇ.ಡಿ.ಅಧಿಕಾರಿಗಳು ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾನೂನಿನ (ಪಿಎಂಎಲ್ಎ) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಡಿಎಚ್ಎಫ್ಎಲ್(ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಶನ್ ಲಿಮಿಟೆಡ್) ತನಿಖೆಯಲ್ಲಿ ಸಿಕ್ಕ ವಿವರಗಳ ಆಧಾರದಲ್ಲಿ ಯೆಸ್ ಬ್ಯಾಂಕ್ ವಿರುದ್ಧ ಕ್ರಮ ಆರಂಭಿಸಲಾಗಿದೆ.(ಏಜೆನ್ಸೀಸ್)
ಇಡಿ ಅಧಿಕಾರಿಗಳಿಂದ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ನಿವಾಸದಲ್ಲಿ ಶೋಧ ಕಾರ್ಯ: ಲುಕ್ ಔಟ್ ನೋಟಿಸ್ ಜಾರಿ