ಚೆನ್ನೈ: ಮರಳು ಗಣಿಗಾರಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತಮಿಳುನಾಡಿನ ವಿವಿಧೆಡೆ ದಾಳಿ ಮಾಡಿ ಶೋಧ ಕಾರ್ಯ ನಡೆಸುತ್ತಿದೆ.
ಲಾಟರಿ ಕಿಂಗ್ ಎಂದೇ ತಮಿಳುನಾಡಿನಲ್ಲಿ ಖ್ಯಾತಿ ಪಡೆದಿರುವ ಸ್ಯಾಂಟಿಯಾಗೊ ಮಾರ್ಟಿನ್ ಅಳಿಯ ಆಧವ್ ಅರ್ಜುನ್ ಮನೆ ಸೇರಿದಂತೆ ಅನೇಕ ಕಡೆ ದಾಳಿ ಮಾಡಿದ್ದಾರೆ.
ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಚೆನ್ನೈ ಹಾಗೂ ಕೊಯಮತ್ತೂರು ಸೇರಿದಂತೆ 10ಕ್ಕೂ ಹೆಚ್ಚು ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.