ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ಕನೇ ಬಾರಿ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮುನ್ನ ನವೆಂಬರ್ 2, ಡಿಸೆಂಬರ್ 21 ಹಾಗೂ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಗೈರಾಗಿದ್ದರು. ಈ ನಾಲ್ಕನೇ ಸಮನ್ಸ್ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿಯ ಹಿರಿಯ ಮುಖಂಡರೊಬ್ಬರು, ಕೊನೆಯ ಸಮನ್ಸ್ ನಂತರ ತನಿಖೆಗೆ ಸಹಕರಿಸಲು ಸಿದ್ದವಿರುವುದಾಗಿ ತಿಳಿಸಿದ್ದಾರೆ. ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಪ್ನ ಹಿರಿಯ ಮುಖಂಡರೊಬ್ಬರು ಆರೋಪಿಸಿದ್ದಾರೆ.