More

    ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ಗೆ ED ನೋಟಿಸ್

    ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

    ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬಹುಕೋಟಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 7 ತಿಂಗಳ ಹಿಂದೆ ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

    ಇದನ್ನೂ ಓದಿ: ತೆಲಂಗಾಣ ಚುನಾವಣೆ; ಕಾಂಗ್ರೆಸ್​ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಕೇಜ್ರಿವಾಲ್​ಗೆ ಸಮನ್ಸ್​ ನೀಡಲಾಗಿದೆ. ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇದೇ ಮೊದಲ ಬಾರಿಗೆ ನೋಟಿಸ್​ ಜಾರಿ ಮಾಡಿದೆ.

    ಇತ್ತ ಕೇಜ್ರಿವಾಲ್​ಗೆ ಸಮನ್ಸ್​ ನೀಡಿರುವ ತನಿಖಾ ಸಂಸ್ಥೆಯ ಕ್ರಮವನ್ನು ಖಂಡಿಸಿರುವ ಸಚಿವ ಸೌರಭ್​ ಭಾರಧ್ವಾಜ್, ಇದು ಕೇಂದ್ರ ಎಎಪಿ ಸರ್ಕಾರದ ವಿರುದ್ಧ ಹೆಣೆದಿರುವ ಷಡ್ಯಂತ್ರ. ವಿಚಾರಣೆಯ ಹೆಸರಿನಲ್ಲಿ ಮುಖ್ಯಮಂತ್ರಿಗಳನ್ನು ಬಂಧಿಸಿ ಸರ್ಕಾರವನ್ನು ಪತನ ಮಾಡಬೇಕೆಂದು ಬಿಜೆಪಿ ಷಡ್ಯಂತ್ರ ಹೆಣೆದಿದೆ. ನಾವು ಯಾರು ಇದಕ್ಕೆ ಹೆದರುವವರಲ್ಲ ಎಂದು ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts