ಚಿನ್ನ ಕಳ್ಳಸಾಗಣೆ ಪ್ರಕರಣ; ರನ್ಯಾ ರಾವ್ ಮನೆ ಸೇರಿದಂತೆ ಹಲವೆಡೆ ಇಡಿ ದಾಳಿ

blank

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್​ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ರಾವ್​ (Ranya Rao) ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್​ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಇಸಿಐಆರ್ ಎಂದರೆ ಎನ್​ಫೋರ್ಸ್​ಮೆಂಟ್ ಕೇಸ್ ಇನ್​ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ.

Enforcement Directorate

ನಟಿ ರನ್ಯಾ ರಾವ್ (Ranya Rao) ಅವರ ಫ್ಲ್ಯಾಟ್, ಉದ್ಯಮಿ ತರುಣ್ ರಾಜ್ ಅವರ ಮನೆ, ಆರ್​ಟಿ ನಗರದಲ್ಲಿರುವ ಜ್ಯೋತಿಷಿ ಕಚೇರಿ, ಪೊಲೀಸ್ ಅಧಿಕಾರಿಗಳು ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದಾರೆ.

ಗೋಲ್ಡ್​ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಬಸ್, ಮೆಟ್ರೋ ಬಳಿಕ ಆಟೋ ದರ ಹೆಚ್ಚಳ; ಎಷ್ಟು ಹೆಚ್ಚಲಿದೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್​

ಮೃತಪಟ್ಟ ಸಾಕುನಾಯಿಗೆ ಜೀವ ತರಿಸಿದ ಮಹಿಳೆ; ಇದಕ್ಕಾಗಿ ಈಕೆ ಖರ್ಚು ಮಾಡಿದ್ದು ಮಾತ್ರ…

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…