ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ರಾವ್ (Ranya Rao) ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಇಸಿಐಅರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಇಸಿಐಆರ್ ಎಂದರೆ ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ.
ನಟಿ ರನ್ಯಾ ರಾವ್ (Ranya Rao) ಅವರ ಫ್ಲ್ಯಾಟ್, ಉದ್ಯಮಿ ತರುಣ್ ರಾಜ್ ಅವರ ಮನೆ, ಆರ್ಟಿ ನಗರದಲ್ಲಿರುವ ಜ್ಯೋತಿಷಿ ಕಚೇರಿ, ಪೊಲೀಸ್ ಅಧಿಕಾರಿಗಳು ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದಾರೆ.
ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಬಸ್, ಮೆಟ್ರೋ ಬಳಿಕ ಆಟೋ ದರ ಹೆಚ್ಚಳ; ಎಷ್ಟು ಹೆಚ್ಚಲಿದೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಮೃತಪಟ್ಟ ಸಾಕುನಾಯಿಗೆ ಜೀವ ತರಿಸಿದ ಮಹಿಳೆ; ಇದಕ್ಕಾಗಿ ಈಕೆ ಖರ್ಚು ಮಾಡಿದ್ದು ಮಾತ್ರ…