More

    ಸಾಧನೆಗೆ ಶಿಕ್ಷಣ ಅಗತ್ಯ

    ಗೋಣಿಕೊಪ್ಪ: ಯಾವುದೇ ಕ್ಷೇತ್ರದಲ್ಲಿ ಸಾಧಿಸಬೇಕಿದಲ್ಲಿ ಶಿಕ್ಷಣ ಅತಿಮುಖ್ಯವಾಗಿದ್ದು, ಮಕ್ಕಳು ಕಲಿಕೆಗೆ ಹೆಚ್ಚು ನೀಡಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋತ್ಸ್ನಾ ಚಿಣ್ಣಪ್ಪ ಹೇಳಿದರು.

    ಲಯನ್ಸ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕ್ರೀಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಆಸಕ್ತ ಕ್ಷೇತ್ರದಲ್ಲಿ ಸಾಧನೆ ಮಾಡಲು ಪಾಲಕರ ಪಾತ್ರವೂ ದೊಡ್ಡದಿದೆ ಎಂದರು.

    ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಥಸಂಚಲನ ನಡೆಸಿಕೊಟ್ಟರು. ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಎನ್. ಪೆಮ್ಮಯ್ಯ, ಪಿ. ಲೋಕೇಶ್ ಕಾರ್ಯಪ್ಪ ಅತಿಥಿಗಳನ್ನು ಸನ್ಮಾನಿಸಿದರು. ಅಂಜನ್ ಚಿಣ್ಣಪ್ಪ, ಲಯನ್ಸ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಪಾಲಕರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts