ಬೆಂಗಳೂರು: ಜುಲೈನಲ್ಲಿ ಪರೀಕ್ಷಾ ಫಲಿತಾಂಶ, ಶಾಲಾರಂಭದ ಬಗ್ಗೆ ಸರ್ಕಾರ ನಿರ್ಣಯಿಸಿಲ್ಲ, ಈ ಬಾರಿ ಯಾವುದೇ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಬಾರದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಬೆಳಗ್ಗೆ ಹೇಳಿದ್ದಾರೆ.
ವರು ಚಿಕ್ಕಬಳ್ಳಾಪುರ ಪ್ರವಾಸದಲ್ಲಿದ್ದು ಸುದ್ದಿಗಾರರ ಜತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಆನ್ ಲೈನ್ ಶಿಕ್ಷಣ ಕುರಿತಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ತಾತ್ಕಾಲಿಕ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿಯ ಬಳಿಕ ಎಲ್ಲ ವಯೋಮಾನದ ವಿದ್ಯಾರ್ಥಿಗಳ ಅವಶ್ಯಕತೆಗನುಗುಣವಾಗಿ ನಿರ್ದಿಷ್ಟ ರೂಪುರೇಷೆ ಪ್ರಕಟಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.