ಮೈಸೂರು: ಮಂಚೇಗೌಡನ ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ವಿಜೇತರಿಗೆ ಭಾನುವಾರ ಬಹುಮಾನ ವಿತರಿಸಲಾಯಿತು.
ಶಾಸಕ ಕೆ.ಹರೀಶ್ಗೌಡ ಮಾತನಾಡಿ, ಸರ್ಕಾರಿ ಕಾಲೇಜು ಆದರೂ ಖಾಸಗಿ ಕಾಲೇಜುಗಳಿಗಿಂತಲೂ ಕೂಡ ಉತ್ತಮ ವಿದ್ಯಾರ್ಥಿಗಳು ಕಲಿಯತ್ತಿದ್ದಾರೆ. ಇದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 46 ಲಕ್ಷ ರೂ. ಅನುದಾನ ನೀಡಿದ್ದು, ಮುಂದೆ ಇನ್ನೂ ಹೆಚ್ಚಿನ ಅನುದಾನ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳಿಗೆ ಕ್ಲಿಷ್ಟಕರ ಪರಿಸ್ಥಿತಿ ಬಂದರೂ ಎದುರಿಸುವಂತಹ ಧೈರ್ಯ ಇರುತ್ತದೆ. ಸರ್ಕಾರಿ ಕಾಲೇಜಿನಲ್ಲಿ ಓದೋ ವಿದ್ಯಾರ್ಥಿಗಳು ಯಾವುದೇ ಕೀಳರಿಮೆ ಇಲ್ಲದೆ ಸಮಾಜಮುಖಿಯಾಗಿ ಜೀವಿಸುವ ಪ್ರಯತ್ನಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಮೈಸೂರು ನಗರದ ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ಕುಮಾರ್ ಮಾತನಾಡಿದರು. ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು, ಅಭಿವೃದ್ಧಿ ಸಮಿತಿಯ ಮಹಾದೇವಪ್ಪ, ಕಾಲೇಜು ಯೋಜನೆಯ ಶಿವಮಲ್ಲು, ಉಪನ್ಯಾಸಕರಾದ ರೇವಣ್ಣ, ಶ್ರೀಕಂಠಯ್ಯ, ನಾರಾಯಣಸ್ವಾಮಿ ಇದ್ದರು.
ಸರ್ಕಾರಿ ಕಾಲೇಜಿಗೆ ಹೆಚ್ಚಿನ ಅನುದಾನ ನೀಡಲು ಯತ್ನ

You Might Also Like
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…