blank

ಸ್ವಸಹಾಯ ಸಂಘಗಳ ಬಲವರ್ಧನೆಗೆ ಶ್ರಮ

blank

ಕಿಕ್ಕೇರಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವರ ಪ್ರಗತಿ, ಮುಖ್ಯವಾಹಿನಿಗೆ ಕರೆತರಲು ಹಲವಾರು ಯೋಜನೆ ರೂಪಿಸಿದ್ದು, ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲು ಸಂತಸವಿದೆ ಎಂದು ಯೋಜನಾಧಿಕಾರಿ ಪ್ರಸನ್ನ ಹೇಳಿದರು.

blank

ಯೋಜನೆ ಕಚೇರಿಯಲ್ಲಿ ಯೋಜನಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಇಲ್ಲಿನ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಬಲವರ್ಧನೆಗೆ ಶ್ರಮಿಸಲಾಗುವುದು. ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಸಮಗ್ರ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಕಿಕ್ಕೇರಿ ಯೋಜನಾ ಕಚೇರಿಯಿಂದ ಬೀದರ್ ಜಿಲ್ಲೆಗೆ ವರ್ಗಾವಣೆಯಾದ ಎಂ. ವೀರೇಶಪ್ಪ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮಂಜು, ವೈ.ಟಿ.ಅಜಯ್, ಕುಮಾರ್, ಹೇಮಂತ್, ರವಿಕುಮಾರ್, ಶರತ್, ಕಸ್ತೂರಿ, ಶಿವರಾಮ್, ಯೋಗಿತಾ, ನಳಿನಿ, ಶಶಿಪ್ರಭಾ ಇತರರು ಇದ್ದರು.

 

Share This Article
blank

ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಲು ಇಲ್ಲಿದೆ ಸುಲಭ ಮಾರ್ಗ.. ಒಮ್ಮೆ ಟ್ರೈ ಮಾಡಿ | Lizards

Lizards: ಹಲ್ಲಿಗಳು ಹೆಚ್ಚಾಗಿ ಮನೆಯ ಗೋಡೆಗಳ ಮೇಲೆ ಮತ್ತು ಅಡುಗೆಮನೆಯಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹಲ್ಲಿಗಳ ಬಗ್ಗೆ…

ಹನಿ-ಹನಿ ಮೂತ್ರ ಬರುತ್ತಿದ್ರೆ ಈ ಅಂಗಕ್ಕೆ ಹಾನಿಯಾಗಿದೆ ಎಂದರ್ಥ!; ಅನಿಯಂತ್ರಿತ ಮೂತ್ರದ ಸಮಸ್ಯೆಗೆ ಕಾರಣ ಏನು? | Urinary

Urinary : ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಮೂತ್ರ ಸಂಬಂಧಿತ ಸಮಸ್ಯೆಗಳು ಭಾಧಿಸುತ್ತವೆ. ಅನೇಕ ಜನರಿಗೆ ಮೂತ್ರ…

blank