ಅಂಬೇಡ್ಕರ್​ ಜಯಂತಿ ಗುರಿಯಾಗಿಸಿ ಮೊಟ್ಟೆ ಎಸೆದ ಕಿಡಿಗೇಡಿಗಳು; ಪ್ರಕರಣ ದಾಖಲು

eggs

ಮುಂಬೈ: ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಾಹು ಮಹಾರಾಜ್, ಜ್ಯೋತಿಬಾ ಫುಲೆ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳ ಗುಂಪೊಂದು ಮೊಟ್ಟೆ ಹಾಗೂ ಕಿತ್ತಳೆ ಸಿಪ್ಪೆ ಎಸೆದು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ನವಿಮುಂಬೈನ ಪನ್ವೇಲ್ ಪ್ರದೇಶದ ಕೊಂಗಾವ್‌ನಲ್ಲಿ ನಡೆದಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರೋಪಿಗಳಿಗೆ ಬಲೆ ಬೀಸಿದ್ದಾರೆ. ಇತ್ತ ಘಟನೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಎಸ್​ಆರ್​ಎಚ್​ ವಿರುದ್ಧ 25ರನ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪನ್ವೇಲ್ ಪ್ರದೇಶದ ಕೊಂಗಾವ್‌ನಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಾಹು ಮಹಾರಾಜ್, ಜ್ಯೋತಿಬಾ ಫುಲೆ ಅವರ ಜನ್ಮ ಜಯಂತಿಯನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಕೆಲವು ದುಷ್ಕರ್ಮಿಗಳು ಮೊಟ್ಟೆ, ಕಿತ್ತಳೆ ಸಿಪ್ಪೆಗಳನ್ನು ಎಸೆದು ಪರಾರಿಯಾಗಿದ್ದಾರೆ.

ಯಾವ ಕಾರಣಕ್ಕಾಗಿ ಈ ರೀತಿ ಮಾಡಲಾಯಿತು ಎಂದು ತಿಳಿದು ಬಂದಿಲ್ಲ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295 (ಎ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…