ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಎರಡು ರೈಲುಗಳ ನಡುವಿನ ಸಂಘರ್ಷದಿಂದ ಈ ಅವಘಡ ಉಂಟಾಗಿದೆ.
ವಿಶಾಖಪಟ್ಟಣ-ಪಾಲಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣ-ರಾಯಗಡ ರೈಲುಗಳ ಹಿಂಭಾಗ ಘರ್ಷಣೆಗೆ ಒಳಗಾದ್ದರಿಂದ ಈ ಅವಘಡ ಸಂಭವಿಸಿದೆ. ಈ ಅವಘಡದ ತೀವ್ರತೆಗೆ ರೈಲು ಹಳಿ ತಪ್ಪಿದ್ದು, ಬೋಗಿ ಕಳಚಿಕೊಂಡ ಪ್ರಕರಣವೂ ನಡೆದಿದೆ.
PM @narendramodi spoke to Railway Minister Shri @AshwiniVaishnaw and took stock of the situation in the wake of the unfortunate train derailment between Alamanda and Kantakapalle section.
Authorities are providing all possible assistance to those affected. The Prime Minister…
— PMO India (@PMOIndia) October 29, 2023
ವಿಶಾಖಪಟ್ಟಣಂ-ಪಾಲಸ ರೈಲು ಓವರ್ಹೆಡ್ ಕೇಬಲ್ ಸಂಪರ್ಕ ಕಡಿತಗೊಂಡಿದ್ದರಿಂದ ನಿಂತಿತ್ತು. ನಂತರ ಬಂದ ಇನ್ನೊಂದು ರೈಲು ಅದಕ್ಕೆ ಡಿಕ್ಕಿ ಹೊಡೆದಿದ್ದು, ಮೂರು ಬೋಗಿಗಳು ಹಳಿ ತಪ್ಪಿವೆ. ಸಿಬ್ಬಂದಿಯ ಲೋಪವೂ ಅವಘಡಕ್ಕೆ ಕಾರಣ ಎಂದು ರೈಲ್ವೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಂತ್ರಸ್ತರಾದವರ ನೆರವಿಗಾಗಿ ಈಸ್ಟ್ ಕೋಸ್ಟ್ ರೈಲ್ವೆ ಸಹಾಯವಾಣಿ ಆರಂಭಿಸಿದ್ದು, ತುರ್ತು ಕಾರ್ಯಾಚರಣೆ ಭರದಿಂದ ನಡೆದಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ, ಸಂತಾಪ ಸೂಚಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕೈಗೊಂಡಿದ್ದಾಗಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಸಂತಾಪ ಸೂಚಿಸಿದ್ದು, ಸೂಕ್ತ ಕ್ರಮಕೈಗೊಂಡಿದ್ದಾಗಿ ತಿಳಿಸಿದ್ದಾರೆ.
Train Accident between Alamanda and Kantakapalle Stations in Vizianagaram-Kottavalasa Rly section of Waltair Division of ECoR in Howrah-Chennai Main Line. @RailMinIndia
Helpline Numbers …👇👇👇 pic.twitter.com/ahAgX4Kohd
— East Coast Railway (@EastCoastRail) October 29, 2023
ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..