More

    ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ

    ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅಧಿಕಾರ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್​ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಿಎಂ ಆಯ್ಕೆಯಾಗುವ ಮೂಲಕ ಮಹಾರಾಷ್ಟ್ರದಲ್ಲಿ ಸೃಷ್ಟಿಯಾಗಿದ್ದ ರಾಜಕೀಯ ಬಿಕ್ಕಟ್ಟಿಗೆ ಅಂತ್ಯ ಹಾಡಿದ್ದಾರೆ.

    ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಿಎಂ ಆಗಿ ಏಕನಾಥ್​ ಶಿಂಧೆ ರಾಜ್ಯಪಾಲರಿಂದ ಪ್ರತಿಜ್ಱ ವಿಧಿ ಬೋಧಿಸುವ ಮೂಲಕ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸುವ ಮುನ್ನ ಮಾತನಾಡಿದ ಶಿಂಧೆ, ರಾಜ್ಯದ ಜನರ ಆಕಾಂಕ್ಷೆಗೆ ತಕ್ಕಂತೆ ಸರ್ಕಾರ ನಡೆಸುತ್ತೇವೆ ಎಂದಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರಿಗೂ ಧನ್ಯವಾದ ತಿಳಿಸಿದರು. ಇನ್ನು ಪ್ರಮಾಣ ವಚನ ಸಮಾರಂಭದಕ್ಕೆ ನೂತನ ಸಿಎಂ ಶಿಂಧೆ ಅವರು ಕುಟುಂಬಸ್ಥರೊಂದಿಗೆ ಆಗಮಿಸಿದ್ದರು.

    ಕೊನಕ್ಷಣದಲ್ಲಿ ಸಿಎಂ ಪಟ್ಟ; ಮುಖ್ಯಮಂತ್ರಿಯಾಗಿದ್ದ ಉದ್ಧವ್​ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ರಾತ್ರಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಿಸಬೇಕಿದ್ದ ಶಿವಸೇನೆಯ ಬಂಡಾಯ ನಾಯಕ ಏಕನಾಥ್​ ಶಿಂಧೆ ಅವರಿಗೇ ಮುಖ್ಯಮಂತ್ರಿ ಪಟ್ಟ ನೀಡಲು ತೀರ್ಮಾನಿಸಲಾಗಿದೆ.
    ಈ ಕುರಿತು ಪತ್ರಿಕಾಗೋಷ್ಠಿ ಕರೆದ ಫಡ್ನವಿಸ್​ ಮಾಹಿತಿ ನೀಡಿದ್ದಾರೆ. ಸದ್ಯ ಏಕನಾಥ್​ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಲಾಗಿದೆ. ಉಳಿದ ಬೆಳವಣಿಗೆಗಳ ಕುರಿತು ನಂತರದಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

    ಏಕನಾಥ ಶಿಂಧೆ ಹಿನ್ನಲೆ:

    ಆಟೋ ಚಾಲಕರಿಂದ ಸಿಎಂ ವರೆಗೆ!; ಮಹಾರಾಷ್ಟ್ರ ಸರ್ಕಾರವನ್ನು ಅಲ್ಲಾಡಿಸಿ, ಕೊನೆಗೆ ಉದ್ಧವ್​ ಠಾಕ್ರೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಮುಖ್ಯಮಂತ್ರಿ ಖುರ್ಚಿಯನ್ನೇರಲು ರೆಡಿಯಾಗಿರುವ ಈ ಶಿಂಧೆ ಯಾರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕೇವಲ 18 ನೇ ವಯಸ್ಸಿಗೆ ರಾಜಕೀಯಕ್ಕೆ ಧುಮುಕಿದ ಶಿಂಧೆ ಅವರ ರಾಜಕೀಯ ಜೀವನ ಅಷ್ಟು ಸುಲಭವಾಗಿರಲಿಲ್ಲ.

    ಏಕನಾಥ್​ ಶಿಂಧೆ ಅವರಿಗೆ ಈಗ 56 ವರ್ಷ ವಯಸ್ಸು. ಮೂಲತಃ ಇವರು ಆಟೋ ಚಾಲಕ. ಕುತೂಹಲದ ಸಂಗತಿ ಎಂದರೆ, ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಏಕನಾಥ್ ಶಿಂಧೆ ಅವರ ರಾಜಕೀಯ ಗುರು. ಇದೀಗ ಅವರೇ ಉದ್ಧವ್​ ಠಾಕ್ರೆಯ ಖುರ್ಚಿಯನ್ನು ಏರಲು ಸಿದ್ಧರಾಗಿದ್ದಾರೆ.  ಏಕನಾಥ್ ಶಿಂಧೆ ಮಹಾರಾಷ್ಟ್ರದ ಸತಾರಾ ನಿವಾಸಿ. ರಾಜಕೀಯ ವಿದ್ಯಾರ್ಥಿಯಾಗಿರುವ ಇವರು, ಬಾಳಾಸಾಹೇಬ್​ ಠಾಕ್ರೆ ಅವರನ್ನು ಗುರುವಾಗಿ ಸ್ವೀಕರಿಸಿದ್ದರು. ರಾಜಕೀಯದಲ್ಲಿಯೇ ಮುಂದುವರೆಯಬೇಕು ಎನ್ನುವ ಕಾರಣಕ್ಕೆ ಸತಾರಾವನ್ನು ತೊರೆದು ಶಿವಸೇನೆಯ ಪ್ರಮುಖ ನೆಲೆಯಾದ ಥಾಣೆಗೆ ತೆರಳಿದರು.

    ಶಿವಸೇನೆ ಸೇರುವ ಮುನ್ನ ಶಿಂಧೆ ಬಹಳ ಕಾಲ ಕಾರು ಓಡಿಸುತ್ತಿದ್ದರು. ಪಕ್ಷದ ಕಾರ್ಯಕರ್ತರ ಸಂಘವನ್ನೂ ಆರಂಭಿಸಿದರು. 1980 ರ ದಶಕದಲ್ಲಿ ಥಾಣೆಯಲ್ಲಿ ಶಾಖಾ ಮುಖ್ಯಸ್ಥರಾಗಿದ್ದ ಶಿಂಧೆ 2004 ರಲ್ಲಿ ಶಾಸಕರಾಗುವ ಮೊದಲು ಥಾಣೆ ಮುನ್ಸಿಪಲ್ ಕಾರ್ಪೊರೇಟರ್ ಆಗಿದ್ದರು. ಶಿಂಧೆ ಅವರು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ಮೂರು ವರ್ಷಗಳಿಂದ ನಾಗರಿಕ ಸಂಸ್ಥೆ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ. ಅವರು ನಾಲ್ಕು ವರ್ಷಗಳ ಕಾಲ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸದನದ ನಾಯಕರಾಗಿ ಸೇವೆ ಸಲ್ಲಿಸಿದರು.
    2004 ರಿಂದ, ಅವರು ಸತತ ನಾಲ್ಕು ಚುನಾವಣೆಗಳನ್ನು ಗೆದ್ದಿದ್ದಾರೆ, ಅವರ ಮಗ ಶ್ರೀಕಾಂತ್ ಶಿಂಧೆ ಕಲ್ಯಾಣ್‌ನಿಂದ ಸೇನಾ ಸಂಸದರಾಗಿದ್ದಾರೆ. (ಏಜೆನ್ಸೀಸ್​)

    ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts