More

    ವೃದ್ಧ ದಂಪತಿ ಮೇಲೆ ಧರ್ಮಗುರುವಿನಿಂದ ಥಳಿತ

    ವಿಟ್ಲ: ಪುಣಚ ಗ್ರಾಮದ ಪರಿಯಾಲ್ತಡ್ಕ ಸಮೀಪದ ಮಣಿಲ ಚರ್ಚ್ ವ್ಯಾಪ್ತಿಯಲ್ಲಿ ಸಮುದಾಯದ ವೃದ್ಧ ದಂಪತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಗುರು ಮತ್ತು ಕಾರು ಚಾಲಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮನೇಲ ಪರಿಯಾಲ್ತಡ್ಕದ ಕ್ರೈಸ್ಟ್ ಕಿಂಗ್ ಪ್ಯಾರಿಷ್‌ನ ಪಾದ್ರಿ ನೆಲ್ಸನ್ ಒಲಿವೆರಾ ಹಲ್ಲೆ ಆರೋಪಿ. ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79) ಹಲ್ಲೆಗೊಳಗಾದವರು.

    ೆ.29ರಂದು ಘಟನೆ ನಡೆದಿದ್ದು, ಪಾದ್ರಿ ನೆಲ್ಸನ್ ಒಲಿವೆರಾ ಮನೆ ಆಶೀರ್ವಾದಕ್ಕೆ ತೆರಳಿದ ವೇಳೆ ಮನೆಯ ಹೊರಗೆ ವೃದ್ಧ ದಂಪತಿ ಜತೆ ವಾಗ್ವಾದ ನಡೆಸಿ ಬಳಿಕ ಹಲ್ಲೆ ನಡೆಸಿದ್ದು, ಪತಿಯ ರಕ್ಷಣೆಗೆ ಮುಂದಾದ ಮಹಿಳೆ ಮೇಲೆಯೂ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ದಾಖಲಾಗಿತ್ತು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಹಲ್ಲೆ, ಮಾನಭಂಗ ಯತ್ನ ಪ್ರಕರಣ: ಧರ್ಮಗುರುಗಳು ಮನೆ ಶುದ್ಧ ಭೇಟಿ ನಿಮಿತ್ತ ತೆರಳಿದ್ದು, ಪ್ರಾಯಸ್ಥ ದಂಪತಿ ಚರ್ಚ್‌ಗೆ ಯಾವುದೇ ದೇಣಿಗೆ, ವಂತಿಗೆ ನೀಡಿ ಸಹಕರಿಸುತ್ತಿಲ್ಲ ಎಂದೆಲ್ಲ ಹೇಳಿ ಆ ದಂಪತಿಯನ್ನು ಅವಾಚ್ಯ ಪದಗಳಿಂದ ನಿಂದಿಸಿ, ವೃದ್ಧನ ಕೊರಳಪಟ್ಟಿ ಹಿಡಿದು ಮಾರು ದೂರ ಎಳೆದುಕೊಂಡು ಹೋಗಿ ಹೊಡೆದಿದ್ದಾರೆ ಎಂದು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪಾದ್ರಿ ನೆಲ್ಸನ್ ಒಲಿವೆರಾ ಮತ್ತು ಕಾರು ಚಾಲಕ ಅಲ್ಫೋನ್ಸ್ ಮೊಂತೆರೋ ವಿರುದ್ಧ ಹಲ್ಲೆ, ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.

    ಧರ್ಮಪ್ರಾಂತ್ಯದಿಂದ ಶಿಸ್ತು ಕ್ರಮ
    ಪರಿಯಾಲ್ತಡ್ಕ ಮಣಿಲ ಚರ್ಚ್ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸಮಗ್ರ ತನಿಖೆ ಕೈಗೊಳ್ಳಲಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಪ್ರಕಟಣೆ ತಿಳಿಸಿದೆ. ಪೊಲೀಸರ ತನಿಖೆಗೆ ಸಹಕಾರ ನೀಡಲಾಗುವುದು. ತಕ್ಷಣದಿಂದ ಜಾರಿಗೆ ಬರುವಂತೆ ಧರ್ಮಗುರುಗಳನ್ನು ಧಾರ್ಮಿಕ ಸೇವೆಯಿಂದ ವಜಾ ಮಾಡಲಾಗುವುದು. ಜನರ ಆಧ್ಯಾತ್ಮಿಕ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಬೇರೆಯವರನ್ನು ನಿಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts