More

    ರಾಜ್ಯಕ್ಕೆ ಅಮಿತ್ ಷಾ ಭೇಟಿ; ಬಿಜೆಪಿಗೆ ಬೂಸ್ಟರ್ ಡೋಸ್

    ಬೆಂಗಳೂರು:
    ರಾಜ್ಯಕ್ಕೆ ಭೇಟಿ ನೀಡಿರುವ ಗೃಹ ಸಚಿವ ಅಮಿತ್ ಷಾ ಅವರು ಚುನಾವಣಾ ಪ್ರಚಾರ ಕಣದಲ್ಲಿ ಸಂಚಲನ ತಂದಿರುವುದಲ್ಲದೆ, ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಬೂಸ್ಟರ್ ಡೋಸ್ ನೀಡಿದಂತಾಗಿದೆ.
    ಕಳೆದ ಲೋಕಸಭಾ ಚುನಾವಣೆಯಲ್ಲಿ ಪಡೆದಷ್ಟೆ ಸ್ಥಾನಗಳನ್ನು ಈ ಬಾರಿಯೂ ಗಿಟ್ಟಿಸಿಕೊಳ್ಳಬೇಕು ಎನ್ನುವ ಉಮೇದಿನಲ್ಲಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಅಮಿತ್ ಷಾ ಭೇಟಿ ಹೊಸ ಉತ್ಸಾಹವನ್ನು ತುಂಬಿದೆ.
    ಬಿಜೆಪಿ ಮತ್ತು ಜೆಡಿಎಸ್ ಜೊತೆಗೆ ಸಮನ್ವಯತೆ ಸಾಧಿಸಲು ಸತತ ಪ್ರಯತ್ನ ನಡೆಸಿರುವ ಹೈಕಮಾಂಡ್ ಈ ನಿಟ್ಟಿನಲ್ಲಿ ಅಮಿತ್ ಷಾ ಅವರಿಗೂ ಜವಾಬ್ದಾರಿ ಹೊರೆಸಿದೆ. ಆ ಹಿನ್ನೆಲೆಯಲ್ಲಿಯೇ ನಗರದ ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದ ಅಮಿತ್ ಷಾ, ಸತತ ಸಭೆಗಳನ್ನು ನಡೆಸುವ ಮೂಲಕ ಎರಡೂ ಪಕ್ಷಗಳ ನಡುವೆ ಸಮಹತ ತರಲು ಪ್ರಯತ್ನಿಸಿದ್ದಾರೆ. ಅಷ್ಟೆ ಅಲ್ಲ, ಸ್ವತಃ ಪ್ರಚಾರಕ್ಕೂ ಇಳಿದಿರುವ ಅಮಿತ್ ಷಾ, ರಾಮನಗರ ಜಿಲ್ಲೆಯ ಮೂಲಕವೇ ಚುನಾವಣಾ ಪ್ರಚಾರಕ್ಕೂ ಮುಂದಾಗುವ ಮೂಲಕ ಮೈತ್ರಿ ಮಹತ್ವವನ್ನು ಸಾರಿದ್ದಾರೆ.
    ಪ್ರತ್ಯೇಕವಾಗಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಹುರುಪು ತುಂಬುವ ಕೆಲಸ ಮಾಡಿರುವುದು ವಿಶೇಷ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts