More

    ಕೆಂಗೇರಿ ವಾರ್ಡ್​ನಲ್ಲಿ ಚುನಾವಣೆ ಬಹಿಷ್ಕಾರ; ರಸ್ತೆ ಸಮಸ್ಯೆ ಬಗೆಹರಿಸಲು ಆಗ್ರಹ

    ಯಶವಂತಪುರ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಗೇರಿ ವಾರ್ಡ್​ನಲ್ಲಿರುವ ಬಾಬಾಸಾಬರಪಾಳ್ಯ, ಬಸವೇಶ್ವರನಗರ ಹಾಗೂ ಬಿಡಿಎ ಅಪಾರ್ಟ್​ಮೆಂಟ್​ಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್​ ಮಾಡಲಾಗಿತ್ತು.

    ಬಳಿಕ ಈ ರಸ್ತೆಗೆ ಮರು ಸಂಪರ್ಕ ಕಲ್ಪಿಸಿಲ್ಲ. ಇದರಿಂದ ಸ್ಥಳಿಯರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಶಾಲಾಮಕ್ಕಳು ಸಂಕಷ್ಟ ಅನುಭವಿಸುವಂತಾಗಿದೆ. ಸಾಕಷ್ಟು ಬಾರಿ ಈ ಬಗ್ಗೆ ಅಹವಾಲು ಸಲ್ಲಿಸಿದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಪಾಲಿಕೆಯ ಸ್ಥಳಿಯ ಅಧಿಕಾರಿಗಳು ಇತ್ತ ಗಮನಹರಿಸಿಲ್ಲವಾದ್ದರಿಂದ ಅಂದಾಜು 5 ಸಾವಿರ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ.

    ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಮಹಿಳೆಯರು ಸೇರಿ ಗುರುವಾರ ಊರಿನ ಮುಖ್ಯದ್ವಾರದಲ್ಲಿ ಪೋಸ್ಟರ್​ ಅಳವಡಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಜೀವ ಕೈಯಲ್ಲಿ ಹಿಡಿದುಕೊಂಡೇ ಮುಖ್ಯರಸ್ತೆ ದಾಟಬೇಕಾಗಿದೆ. ಸಂಬಂಧಪಟ್ಟವರು ಈಗಲಾದರೂ ಕೂಡಲೇ ಸಮಸ್ಯೆ ಬಗೆಹರಿಸಿ, ಸಿಗ್ನಲ್​ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts