More

    ಚರಂಡಿ ಸಮಸ್ಯೆಗಾಗಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

    ಕುಶಾಲನಗರ: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಪ್ರಕಾಶ್ ಬಡಾವಣೆಯಲ್ಲಿ ಚರಂಡಿ ಸಮಸ್ಯೆ ಬಗೆಹರಿದಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಸ್ಥಳೀಯ ಮುಖಂಡ ಜಾಜಿ ಎಚ್ಚರಿಕೆ ನೀಡಿದ್ದಾರೆ.

    ಕೂಡುಮಂಗಳೂರು ವಾರ್ಡ್‌ನಲ್ಲಿ ಕಳೆದ 9 ತಿಂಗಳಿನಿಂದ ಚರಂಡಿ ಸಮಸ್ಯೆ ಬಗೆಹರಿದಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಸಾರ್ವಜನಿಕರ ಸಮಸ್ಯೆ ಬಗ್ಗೆ ಸ್ಥಳೀಯ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರುತ್ತಿದೆ. ಕೂಡಲೇ ಚರಂಡಿ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇಲ್ಲದಿದ್ದಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಕೂಡುಮಂಗಳೂರು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

    ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಮಾತನಾಡಿ, ಈ ಸಮಸ್ಯೆ 15 ವರ್ಷಕ್ಕೂ ಹಳೆಯದು. ಈಗ 6 ತಿಂಗಳ ಹಿಂದೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಇನ್ನು ಕೆಲ ದಿನಗಳಲ್ಲಿ ಈ ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts