More

    ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಚುನಾವಣಾಧಿಕಾರಿ ಎಚ್.ಎಸ್.ಕೀರ್ತನಾ ಮಾಹಿತಿ

    ಮಂಡ್ಯ: ಶಾಂತಿಯುತ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.
    ಏ.13ರಂದು ವಿಧಾನಸಭೆ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಏ.20 ಕೊನೆಯ ದಿನವಾಗಿದೆ. 21ರಂದು ನಾಮಪತ್ರ ಪರಿಶೀಲನೆ, 24ರಂದು ಉಮೇದುವಾರಿಕೆ ಹಿಂಪಡೆಯಲು ಕಡೇ ದಿನವಾಗಿದೆ. ಮೇ.10 ರಂದು ಮತದಾನ ನಡೆಯಲಿದೆ. 13ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 1,16,494 ಮತದಾರರಿದ್ದಾರೆ. ಈ ಪೈಕಿ 1,06,122 ಪುರುಷರು, 1,10,339 ಮಹಿಳಾ ಮತದಾರರು ಹಾಗೂ 33 ತೃತೀಯ ಲಿಂಗಿಗಳಿದ್ದಾರೆ. ಈ ಬಾರಿ 18 ವರ್ಷ ತುಂಬಿದ 2421 ಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಈ ಪೈಕಿ ನಗರ ಪ್ರದೇಶದಲ್ಲಿ 113, ಗ್ರಮೀಣ ಪ್ರದೇಶದಲ್ಲಿ 141 ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದರು.
    ಸಹಾಯಕ ಚುನಾವಣಾಧಿಕಾರಿ ವಿಜಯಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts