ದಾವಣಗೆರೆ: ಎಲೆಕ್ಟ್ರಿಕ್ ಕಂಟ್ರ್ಯಾಕ್ಟರ್ ಒಬ್ಬರ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದು ಮುರಿದು ಹೋಗಿದ್ದು, ತುಂಡಾಗಿರುವ ವಿದ್ಯುತ್ ಕಂಬದ ನಷ್ಟ ಭರಿಸುವಂತೆ ಅಪಘಾತದಲ್ಲಿ ಮೃತಪಟ್ಟಿರುವ ಚಾಲಕನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.
ದಾವಣಗೆರೆ ಜಿಲ್ಲೆಯ ಜಗಳೂರು-ಹಿರೇಮಲ್ಲನಹೊಳೆ ರಸ್ತೆಯ ಸಿದ್ದಮ್ಮನಹಳ್ಳಿ ಕ್ರಾಸ್ ಬಳಿ ಮೂರು ದಿನಗಳ ಹಿಂದೆ ಈ ಅಪಘಾತ ಸಂಭವಿಸಿತ್ತು. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಜಗಳೂರು ನಿವಾಸಿ ಎಲೆಕ್ಟ್ರಿಕಲ್ ಕಂಟ್ರ್ಯಾಕ್ಟರ್ ಚಾಂದ್ ಪೀರ್ (32) ಮೃತಪಟ್ಟಿದ್ದರು.
ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ತುಂಡಾದ್ದರಿಂದ ಅದರ ನಷ್ಟ ಭರಿಸಿಕೊಡುವಂತೆ ಬೆಸ್ಕಾಂ ಕಿರಿಯ ಇಂಜಿನಿಯರ್ ರಂಗನಾಥ ಎಂಬವರು ಈ ದೂರನ್ನು ದಾಖಲಿಸಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್ ಕುರಿತ ಮುಂದಿನ ಕ್ರಮ ಕುತೂಹಲ ಮೂಡಿಸಿದೆ.
ಕಡಿಮೆ ಬಾಡಿಗೆಗೆ ತೆರಳುತ್ತಿದ್ದವ ಕೊಲೆಯಾಗಿ ಹೋದ; 12 ಗಂಟೆಯೊಳಗೇ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ ಪೊಲೀಸರು
ನಮ್ಮ ಪ್ರಧಾನಿ ಸರಿಯಾದ ಸಮಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ: ಸಿಎಂ ಬಸವರಾಜ ಬೊಮ್ಮಾಯಿ