ವಿದ್ಯುತ್ ಕಂಬಕ್ಕೆ ಮರಳು ಸಾಗಣೆ ಟಿಪ್ಪರ್ ಡಿಕ್ಕಿ, ತಪ್ಪಿದ ಅನಾಹುತ

blank

ದೇವದುರ್ಗ: ಕೃಷ್ಣಾ ನದಿದಂಡೆಯಿಂದ ಮರಳು ಸಾಗಣೆ ಮಾಡುತ್ತಿರುವ ಟಿಪ್ಪರ್‌ಗಳು ತಾಲೂಕಿನಲ್ಲಿ ಒಂದಿಲ್ಲೊಂದು ಅವಘಡ ಮಾಡುತ್ತಿದ್ದು, ಸೋಮವಾರ ತಡರಾತ್ರಿ ತಾಲೂಕಿನ ಚಿಂಚೋಡಿ ಗ್ರಾಮದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಮರಳು ತುಂಬಿಕೊಂಡು ಅತಿವೇಗದಿಂದ ಬಂದ ಟಿಪ್ಪರ್ ಗ್ರಾಮದ ಮುಖ್ಯರಸ್ತೆ ಪಕ್ಕದಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಂಬ ಅರ್ಧಕ್ಕೆ ಕಟ್ ಆಗಿ ಟಿಪ್ಪರ್ ಮೇಲೆ ಬಿದ್ದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದಲ್ಲಿ ವಿದ್ಯುತ್ ಪೂರೈಕೆ ಕಡಿತವಾಗಿ, ಗ್ರಾಮಸ್ಥರು ರಾತ್ರಿಯಿಡಿ ಜಾಗರಣೆ ಮಾಡುವಂತಾಯಿತು. ಈ ಹಿಂದೆ ಮರಳು ತುಂಬಿದ ಲಾರಿಗಳು ಅತಿವೇಗದ ಚಾಲನೆಯಿಂದ ಕುರಿಗಳ ಹಿಂಡಿನ ಮೇಲೆ ಹರಿದಿತ್ತು. ಇಂಥ ಘಟನೆಗಳು ಪದೇಪದೆ ನಡೆಯುತ್ತಿವೆ.

ಆಕ್ರೋಶ: ಸಹಾಯಕ ಆಯುಕ್ತ ಸಂತೋಷ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮರಳು ಸಮಿತಿ ಸಭೆಯಲ್ಲಿ ರಾತ್ರಿ ವೇಳೆ ಮರಳು ಸಾಗಣೆಗೆ ಅವಕಾಶ ನೀಡಬೇಡಿ. ಬೆ.6ರಿಂದ ಸಂಜೆ 6ರವರೆಗೆ ಮಾತ್ರ ಪರವಾನಗಿ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಇಲ್ಲಿ ನಿಯಮ ಪಾಲನೆಯಾಗಿಲ್ಲ. ಹಗಲು ರಾತ್ರಿ ಎನ್ನದೆ ನದಿದಂಡೆಯಿಂದ ಮರಳು ಸಾಗಣೆ ಮಾಡಲಾಗುತ್ತಿದೆ. ಕೂಡಲೇ ರಾತ್ರಿ ವೇಳೆ ಮರಳು ಸಾಗಣೆಗೆ ಕಡಿವಾಣ ಹಾಕಿ, ಅತಿವೇಗದ ಚಾಲನೆ ನಿಯಂತ್ರಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದರೆ.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…