ಕುಂದಾಪುರದ ಫ್ಲೈಓವರ್​ನಲ್ಲಿ ಕೈ ಇಟ್ಟಲ್ಲೆಲ್ಲ ಕರೆಂಟ್!; ವಿದ್ಯುತ್ ಸೋರಿಕೆ, ಸಂಪರ್ಕ ಕಡಿತಗೊಳಿಸಿದ ಮೆಸ್ಕಾಂ

ಕುಂದಾಪುರ: ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕುಂದಾಪುರ ಮೇಲ್ಸೇತುವೆ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ ಅಲ್ಲಿ ಇದೀಗ ಕೈ ಇಟ್ಟಲ್ಲೆಲ್ಲ ಕರೆಂಟ್ ಎಂಬಂತಾಗಿದ್ದು, ಕೂಡಲೇ ವಿದ್ಯುತ್​ ಸಂಪರ್ಕ ಕಡಿತಗೊಳಿಸಿ ಅವಘಡ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್​ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸಲಾರಂಭಿಸಿದೆ. ಫ್ಲೈವರ್​ ಅಂಚಿನ ಗೋಡೆ ಮೇಲೆ ಟೆಸ್ಟರ್​ ಇಟ್ಟು ಪರೀಕ್ಷಿಸಿದರೆ ವಿದ್ಯುತ್ ಪ್ರವಾಹ ಇರುವುದು ದೃಢಪಟ್ಟಿದೆ. ದಾರಿದೀಪಕ್ಕೆ ನೀಡಲಾಗಿರುವ ವಿದ್ಯುತ್ ಸಂಪರ್ಕ ಸೋರಿಕೆ ಆಗುತ್ತಿರುವುದರಿಂದ … Continue reading ಕುಂದಾಪುರದ ಫ್ಲೈಓವರ್​ನಲ್ಲಿ ಕೈ ಇಟ್ಟಲ್ಲೆಲ್ಲ ಕರೆಂಟ್!; ವಿದ್ಯುತ್ ಸೋರಿಕೆ, ಸಂಪರ್ಕ ಕಡಿತಗೊಳಿಸಿದ ಮೆಸ್ಕಾಂ