ಚಿಕ್ಕಮಗಳೂರು: ಫಾರೆಸ್ಟ್ ಲಾರಿ ಮೇಲೆ ಆನೆ ದಾಳಿ ಮಾಡಿದ್ದು ಅರಣ್ಯ ಸಿಬ್ಬಂದಿ ಸೇರಿ ಕೂಲಿ ಕಾರ್ಮಿಕರು ಬಹುದೊಡ್ಡ ಅನಾಹುತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ತರೀಕೆರೆ ತಾಲೂಕಿನ ಲಕ್ಕವಳ್ಳಿ ಭದ್ರಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಫಾರಿ ರಸ್ತೆ ದುರಸ್ತಿ ಮಾಡಲು ಕಾರ್ಮಿಕರನ್ನು ಫಾರೆಸ್ಟ್ ಲಾರಿಯಲ್ಲಿ ಕರೆದೊಯ್ಯಲಾಗಿತ್ತು. ಈ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿದೆ. ಲಾರಿಯ ಮುಂಭಾಗ ಸಂಪೂರ್ಣ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.