ಏಳುಕೊಳ್ಳದ ನಾಡಿನತ್ತ ಭಕ್ತಸಾಗರ

blank

ಉಗರಗೋಳ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶನಿವಾರ ಭಾರತ ಹುಣ್ಣಿಮೆಯನ್ನು ಸರಳವಾಗಿ ಆಚರಿಸಲಾಯಿತು. ಅಧಿಕಾರಿಗಳು, ಅರ್ಚಕರು ಸಮ್ಮುಖದಲ್ಲಿ ಸಾಂಕೇತಿಕವಾಗಿ ಧಾರ್ಮಿಕ ಆಚರಣೆ ಜರುಗಿದವು. ಆದರೆ, ಯಲ್ಲಮ್ಮನಗುಡ್ಡ ಸುತ್ತಲಿನ ಗ್ರಾಮಗಳಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಜೋರಾಗಿತ್ತು.

ಕರೊನಾ ಹಿನ್ನೆಲೆಯಲ್ಲಿ ಶನಿವಾರ ಜರುಗಬೇಕಿದ್ದ ಭಾರತ ಹುಣ್ಣಿಮೆ ಜಾತ್ರೆಯನ್ನು ಸರ್ಕಾರ ರದ್ದುಪಡಿಸಿತ್ತು. ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೂ ನಿಬರ್ಂಧ ಹೇರಿತ್ತು. ಆದರೆ, ನಿರ್ಬಂಧದ ಮಧ್ಯೆಯೂ ಸಾವಿರಾರು ಭಕ್ತರು ಶುಕ್ರವಾರ ರಾತ್ರಿಯಿಂದಲೇ ಯಲ್ಲಮ್ಮನಗುಡ್ಡಕ್ಕೆ ಬರಲಾರಂಭಿಸಿದರು. ಆದರೆ, ಗುಡ್ಡಕ್ಕೆ ಸಂಪರ್ಕಿಸುವ ಮಾರ್ಗ ಮಧ್ಯೆಯೇ ಪೊಲೀಸರು ತಡೆದಿದ್ದರಿಂದ ತಾವಿರುವ ಗ್ರಾಮಗಳ ಕೃಷಿಭೂಮಿಯಲ್ಲೇ ಭಕ್ತರು ಉಳಿದುಕೊಂಡರು. ಅಲ್ಲಿಯೇ ಧಾರ್ಮಿಕ ವಿಧಿ-ವಿಧಾನ ಪೂರೈಸಿದರು. ಪ್ರತಿವರ್ಷ ಭಾರತ ಹುಣ್ಣಿಮೆಗೆ 35 ಲಕ್ಷಕ್ಕೂ ಹೆಚ್ಚು ಭಕ್ತರು ಸೇರುತ್ತಿದ್ದರು. ಆದರೆ, ಕರೊನಾ ವೈರಸ್‌ನಿಂದಾಗಿ ಈ ಬಾರಿ ಯಲ್ಲಮ್ಮನಗುಡ್ಡದಲ್ಲಿ ಭಕ್ತರ ಸಂಭ್ರಮ ಸಂಭ್ರಮ ಕಂಡುಬರಲಿಲ್ಲ.

ಯಲ್ಲಮ್ಮದೇವಿಯು ಮುತ್ತೈದೆಯಾದ ಸವಿನೆನಪಿಗಾಗಿ ಭಕ್ತರು ತಾವು ಉಳಿದುಕೊಂಡಲ್ಲೇ ಒಲೆ ಹೂಡಿ, ಕರಿಗಡಬು, ಹೋಳಿಗೆ, ಕರ್ಚಿಕಾಯಿ, ವಡೆ ಸೇರಿ ವಿವಿಧ ತಿನಿಸು ತಯಾರಿಸಿದರು. ಬಳಿಕ ಪಡ್ಡಲಗಿ ತುಂಬಿ ದೇವಿಗೆ ನೈವೇದ್ಯ ಅರ್ಪಿಸಿದರು. ಮಹಿಳೆಯರು ಹಸಿರು ಬಣ್ಣದ ಬಳೆ ತೊಟ್ಟು ಮುತ್ತೈದೆತನದ ಸಂಭ್ರಮ ಅನುಭವಿಸಿದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…