ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ

blank

ಅರಕಲಗೂಡು: ಯುವ ಜನತೆ ವಿದ್ಯಾರ್ಥಿ ದಿಸೆಯಲ್ಲೇ ಗುಣಮಟ್ಟದ ಶಿಕ್ಷಣ ಪಡೆಯುವ ಜತೆಗೆ ಸೇವಾ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು.

ತಾಲೂಕಿನ ಬಿದರೂರು ಗ್ರಾಮದಲ್ಲಿ ಕೊಣನೂರು ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಭಾರತಕ್ಕಾಗಿ ಯುವಜನತೆ ಮತ್ತು ಯುವ ಜನತೆಗಾಗಿ ಡಿಜಿಟಲ್ ಸಾಕ್ಷರತೆ ಶೀರ್ಷಿಕೆಯಡಿ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ತುಂಬ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಈ ಶಿಬಿರ ಸಹಕಾರಿಯಾಗಲಿದೆ. ಶ್ರಮದಾನ ಮಾತ್ರವಲ್ಲದೆ ವಿವಿಧ ಕಾರ್ಯಕ್ರಮಗಳ ಮೂಲಕ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಗ್ರಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಅನಿತಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚೌಡೇಗೌಡ, ಪ್ರಾಂಶುಪಾಲ ರಾಜೀವ್, ಗ್ರಾಮಸ್ಥರು ಇದ್ದರು.

 

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…