ಶನಿವಾರಸಂತೆ: ಯುವಕರು ಕ್ರೀಡಾ ಚಟುವಟಿಕೆಯ ಜತೆಯಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಕೊಡ್ಲಿಪೇಟೆ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಎರಡನೇ ವರ್ಷದ ನಾಡಪ್ರಭು ಕೆಂಪೇಗೌಡ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಆಟಗಾರರನ್ನು ಪ್ರೋತ್ಸಾಹಿಸುವ ಕೆಲಸವನ್ನು ಗ್ರಾಮದ ಪ್ರಮುಖರು ಮಾಡಬೇಕು ಎಂದು ಸಲಹೆ ನೀಡಿದರು.
ನಿವೃತ್ತ ತಹಸೀಲ್ದಾರ್ ಜಯರಾಮ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ಕೊಡ್ಲಿಪೇಟೆ ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ್, ಉದ್ಯಮಿ ರಮೇಶ್, ರಾಮೇಗೌಡ, ಬ್ಯಾಡಗೊಟ್ಟ ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಹನೀಫ್, ತೇಜಕುಮಾರ್, ಜೆ.ಎಲ್.ಜನಾರ್ದನ್, ಪ್ರಸನ್ನ, ಔರಂಗಜೇಬ್, ಅಭಿ, ಒಕ್ಕಲಿಗ ಯುವ ವೇದಿಕೆ ಕಾರ್ಯದರ್ಶಿ ಅವಿನಾಶ್ ಇತರರು ಇದ್ದರು.
ಲೀಗ್ನಲ್ಲಿ ಯುವರತ್ನ ತಂಡ ಚಾಂಪಿಯನ್ಪಟ್ಟ ಅಲಂಕರಿಸಿದರೆ, ಸ್ಟಾರ್ ವಾರಿಯರ್ಸ್ ತಂಡ ರನ್ನರ್ಸ್ ಸ್ಥಾನ ಪಡೆಯಿತು. ಒಟ್ಟು 12ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದವು.