ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಮೊಮ್ಮಗ ಅಮಾರ್ತ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ನೆರವೇರುತ್ತಿದೆ.
ಇಬ್ಬರು ರಾಜಕಾರಣಿಗಳ ಕುಟುಂಬಸ್ಥರ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ತೆರಳಿ, ಶುಭ ಹಾರೈಸಿದ್ದಾರೆ. ನಗರದ ತಾಜ್ ಹೋಟೆಲ್ನಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಈ ಸಮಾರಂಭಕ್ಕೆ ಆಹ್ವಾನಿತ ಗಣ್ಯರಿಗಷ್ಟೇ ಪ್ರವೇಶವಿದ್ದು, ಈಗಾಗಲೇ ಸಾಕಷ್ಟು ಮಂದಿ ಆಗಮಿಸಿ ಶುಭ ಹಾರೈಸಿದ್ದಾರೆ.
ಇವರಿಬ್ಬರ ನೆಂಟಸ್ತನದ ಕುರಿತು ಬಹಳ ಹಿಂದೆಯೇ ಮಾಹಿತಿ ಬಹಿರಂಗಗೊಂಡಿದ್ದು, ಇಂದು ನಿಶ್ಚಿತಾರ್ಥ ನೆರವೇರುತ್ತಿದೆ. ಸಮಾರಂಭದಲ್ಲಿ ಎಸ್.ಎಂ.ಕೃಷ್ಣ, ಡಿ.ಕೆ.ಶಿವಕುಮಾರ್ ಕುಟುಂಬಸ್ಥರು, ಆಪ್ತರ ಜತೆಗೆ ಸಾಕಷ್ಟು ವಿವಿಧ ರಂಗದ ಸಾಕಷ್ಟು ಗಣ್ಯರು ಕೂಡ ಉಪಸ್ಥಿತರಿದ್ದಾರೆ.