More

    ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತಿತರ ಕೋರ್ಸ್​ಗಳ ಪ್ರವೇಶಾತಿಗೆ ಡಿ.31ರವರೆಗೂ ಅವಕಾಶ ನೀಡಿದ ಸುಪ್ರೀಂ ಕೋರ್ಟ್

    ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಕೋರ್ಸುಗಳಿಗೆ ಡಿ.31ರವರೆಗೂ ಪ್ರವೇಶಾವಕಾಶ ಕಲ್ಪಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

    ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರತಿವರ್ಷ ಜುಲೈ 31ರೊಳಗೆ ಪ್ರವೇಶಾತಿ ಮುಗಿಸುವಂತೆ 2012ರಲ್ಲಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸುಗಳಿಗೆ ಡಿ.31ರವರೆಗೂ ಪ್ರವೇಶ ಪಡೆಯಲು ಅವಕಾಶ ಕೊಡಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಸಲ್ಲಿಸಿತ್ತು. ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ರಾಜ್ಯದ ಮನವಿಯನ್ನು ಪುರಸ್ಕರಿಸಿದೆ ಎಂದು ತಿಳಿಸಿದರು.

    ಇದನ್ನೂ ಓದಿ: ತನ್ನದೇ ಸಿನಿಮಾ ಟ್ರೇಲರ್​ ಬಿಡುಗಡೆ ಸಮಾರಂಭಕ್ಕೆ ನಾಯಕ ನಟನೇ ಗೈರು!

    ಸುಪ್ರೀಂಕೋರ್ಟಿನ ಆದೇಶದಂತೆ ಇದೇ ತಿಂಗಳ 31ರೊಳಗೆ ಇಂಜಿನಿಯರಿಂಗ್ ಸೀಟು ಹಂಚಿಕೆ ಪ್ರಕ್ರಿಯೆ ಮುಗಿಸಬೇಕಾಗಿದೆ. ಹೀಗಾಗಿ ವೈದ್ಯಕೀಯ ಸೀಟು ಹಂಚಿಕೆ ನಂತರ ಖಾಲಿ ಉಳಿದ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ಸೀಟುಗಳಿಗೆ ಮತ್ತೊಮ್ಮೆ ಕ್ಯಾಶುಯಲ್ ವೇಕೆನ್ಸಿ ರೌಂಡ್’ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು.

    ಇದನ್ನೂ ಓದಿ: ಇದು ‘ಎಣ್ಣೆ-ಏಟು’: ಪಾನಮತ್ತ ಚಾಲಕ, ಕೋಪೋದ್ರಿಕ್ತ ಮಾಲೀಕ; ಮುಂದಾಗಿದ್ದೆಲ್ಲ ವೈರಲ್!

    ಹಿಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳನ್ನು ಒಟ್ಟಿಗೇ ಹಂಚಲಾಗುತ್ತಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಆದಾಯ ಮಿತಿ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದು ಇತ್ಯರ್ಥವಾಗುವವರೆಗೂ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶಾತಿ ಕೈಗೊಳ್ಳದಂತೆ ತಡೆಯಾಜ್ಞೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ (ಎಐಸಿಟಿಇ) ಮತ್ತು ಭಾರತೀಯ ಮೆಡಿಕಲ್ ಕೌನ್ಸಿಲ್ ಜತೆ ಚರ್ಚಿಸಿ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಸಂಯೋಜಿತವಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು ಎಂದು ಅವರು ಹೇಳಿದರು.

    ದೇಶದಲ್ಲಿ ಶತಕ ದಾಟಿತು ಒಮಿಕ್ರಾನ್ ಪ್ರಕರಣ; ವೇಗವಾಗಿ ಹರಡುತ್ತಿರುವುದು ಗೋಚರ, ಹೆಚ್ಚಾಯ್ತು ರೂಪಾಂತರಿ ವೈರಸ್​ ಆತಂಕ!

    ಅಂದು ನಿಧಿ ಸುಬ್ಬಯ್ಯ, ಇಂದು ಆವಂತಿಕಾ ಶೆಟ್ಟಿ; ಇಬ್ಬರದ್ದೂ ಬಹುತೇಕ ಒಂದೇ ಥರ ಬೇಸರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts