ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದ ಬಲದಿಂದ ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಹೇಳಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಸೋಮವಾರ ಪುರಭವನದಲ್ಲಿ ಆಯೋಜಿಸಿದ್ದ “ಅಂಬೇಡ್ಕರ್ ಜನ್ಮ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮ ಸಮಾಜ ಕನಸು ಕಂಡವರು ಅಂಬೇಡ್ಕರ್. ಸಿವಿಲ್ ನ್ಯಾಯಧೀಶರ ನೇಮಕಾತಿ ಆಯ್ಕೆಯಲ್ಲಿ ಹೆಚ್ಚಿನ ಸಂಖ್ಯೆ ಎಸ್ಸಿ,ಎಸ್ಟಿ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ಮೇರಿಟ್ ಆಧಾರದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ನಲ್ಲಿ ಸೀಟ್ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುತ್ತಿದ್ದಾರೆ ಎಂದರು.
ಮತದಾನ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ:ತುಷಾರ್ ಗಿರಿನಾಥ್ ಹೇಳಿಕೆ
ನಟ ಶರಣ್ ಮಾತನಾಡಿ, ನಮ್ಮ ಜೀವನದಲ್ಲಿ ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಪ್ರಪಂಚ ಕಂಡ ಅಮೂಲ್ಯ ರತ್ನ ಇವರು. “ಇತಿಹಾಸ ಅರಿವಿಲ್ಲದವರು, ಇತಿಹಾಸ ಸೃಷ್ಟಿಸಲಾರ’ ಎಂದು ಹೇಳಿದ್ದರು. ಅಪ್ರತಿಮವಾದ ಶಕ್ತಿ ಅಂಬೇಡ್ಕರ್ ಆಗಿದ್ದರು ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.ಸಂಘದ ಅಧ್ಯಕ್ಷ ಎ.ಅಮೃತ್ರಾಜ್, ಸುಮಂಗಲಿ ಸೇವಾ ಆಶ್ರಮ ಅಧ್ಯೆ ಎಸ್.ಜಿ.ಸುಶೀಲಮ್ಮ, ಬಿಬಿಎಂಪಿ ಕಂದಾಯ ವಿಭಾಗ ಜಂಟಿ ಮತ್ತಿತರರಿದ್ದರು.