5ರವರೆಗೆ ದಾಖಲಾತಿ ಆಂದೋಲನ

blank

ಎನ್.ಆರ್.ಪುರ: ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಜೂ.5ರವರೆಗೆ ದಾಖಲಾತಿ ಆಂದೋಲನ ಜಾಥಾ ನಡೆಯಲಿದೆ ಎಂದು ಬಿಇಒ ಕೆ.ಆರ್.ಪುಷ್ಪಾ ತಿಳಿಸಿದರು.

blank
blank

ಶುಕ್ರವಾರ ಕರ್ನಾಟಕ ಪಬ್ಲಿಕ್ ಸ್ಕೂಲಿನ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ ಮಾತನಾಡಿ, ತಾಲೂಕಿನಲ್ಲಿ 78 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ 8 ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರಾರಂಭೋತ್ಸವ ನಡೆಸಿ ಮಕ್ಕಳಿಗೆ ಸಿಹಿ ಊಟ ಬಡಿಸಿ, ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ವಿತರಿಸಲಾಗುತ್ತಿದೆ ಎಂದರು.
ಕೆಪಿಎಸ್ ಆವರಣದಿಂದ ಬಸ್ ನಿಲ್ದಾಣದವರೆಗೆ ದಾಖಲಾತಿ ಆಂದೋಲನ ಜಾಥಾ ನಡೆಯಿತು. ಕೆಪಿಎಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕೆಪಿಎಸ್ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮಣ್ ಶೆಟ್ಟಿ, ಉಪಾಧ್ಯಕ್ಷ ಜಿ.ಪುರುಷೋತ್ತಮ್, ಸದಸ್ಯರಾದ ಅರುಣ ಜೈನ್, ಶಕುಂತಲಾ, ಮೇಘನಾ, ಉದಯ, ಸಲೀಂ, ತಹಸೀಲ್ದಾರ್ ರಮೇಶ್, ಪಪಂ ಸದಸ್ಯರಾದ ಜುಬೇದಾ, ಸೈಯದ್‌ವಸೀಂ, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಡಾ. ವಿಜಯಕುಮಾರ್, ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಎಂ.ಪಿ.ಮನು, ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಸೇವ್ಯಾನಾಯಕ್, ಧನಂಜಯ ಮೇಧೂರು, ರಾಮನಾಯ್ಕ ಇತರರಿದ್ದರು.

Share This Article

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…