More

    ಪರಿಸರ ಸಂರಕ್ಷಣೆ ಮಾಡಿ

    ಬೆಳಗಾವಿ: ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ನಾವೆಲ್ಲ ಸ್ವಯಂ ಪ್ರೇರಿತರಾಗಿ ಪರಿಸರ ಸಂರಕ್ಷಣೆ ಮಾಡುವುದನ್ನು ಮೈಗೂಡಿಸಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

    ನಗರದ ಮಚ್ಚೆ ಬಳಿಯ 2ನೇ ಪಡೆ ಕೆಎಸ್‌ಆರ್‌ಪಿ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪರಿಸರ ಹಸಿರಾಗಿದ್ದರೆ ನಾವು ಆರೋಗ್ಯವಂತರಾಗಿರುತ್ತೇವೆ ಎಂದರು. ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲೂ ಪೊಲೀಸ್ ಇಲಾಖೆಯವರು ಬಹುಮುಖ್ಯ ಪಾತ್ರ ವಹಿಸುತ್ತಿದ್ದಾರೆ.

    ಪೊಲೀಸರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಸಾರ್ವಜನಿಕರ ಹಿತಾಸಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಹಗಲಿರುಳು ಸೇವೆ ಸಲ್ಲಿಸುತ್ತಾರೆ. ನಾವೆಲ್ಲರೂ ಅವರ ಅಭೂತಪೂರ್ವ ಸೇವೆ ಗೌರವಿಸೋಣ ಎಂದು ಪೊಲೀಸ್ ಇಲಾಖೆಯ ಸೇವೆಗೆ ಅಭಿನಂದನೆ ಸಲ್ಲಿಸಿದರು. 2ನೇ ಕೆಎಸ್‌ಆರ್‌ಪಿ ಪಡೆಯ ಕಮಾಂಡೆಂಟ್ ಹಂಜಾಹುಸೇನ್, ಸಹಾಯಕ ಕಮಾಂಡೆಂಟ್ ಹೇಮಂತ್ ಕುಮಾರ್, ಸಹಾಯಕ ಕಮಾಂಡೆಂಟ್ ಎನ್.ಪಿ. ಯಡಾಳ್, ಪೊಲೀಸ್ ಇನ್‌ಸ್ಪೆಕ್ಟರ್ ಜಿನೇಶ್, ಪ್ರಶಾಂತ್, ಶ್ರೀಮಂತ, ಪಾಂಡಪ್ಪ, ಸುರೇಶ ಹಾಗೂ ಇಲಾಖೆಯ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts