ಮೈಸೂರು: ಮೈಸೂರು ಗಣೇಶ ಉತ್ಸವ ಸಮಿತಿ ವತಿಯಿಂದ ಭಾನುವಾರ ನಗರದ ಮಾಧವ ಕೃಪದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಮಕ್ಕಳು ಮತ್ತು ಮಹಿಳೆಯರಿಗೆ ಸ್ಥಳೀಯ ಕಲಾವಿದರು ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಬಗ್ಗೆ ಮಾರ್ಗದರ್ಶನ ಮಾಡಿದರು. ಮಕ್ಕಳು ಸೀಡ್ ಬಾಲ್ ಗಣೇಶನನ್ನು ತಯಾರಿಸಿದರು.