blank

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

Environmental protection is all of our responsibility.

ಗುಳೇದಗುಡ್ಡ: ಇಂದು ಯಾಂತ್ರಿಕೃತ ಜೀವನ ಪದ್ಧತಿಯಿಂದ ಗಗನಮುಖಿ ಕಟ್ಟಡ ನಿರ್ಮಾಣಮಾಡಿ ಅರಣ್ಯಗಳ ನಾಶ, ರಾಸಾಯನಿಕ ಬಳಕೆ, ಪ್ಲಾಸ್ಟಿಕ್ ಅತೀಯಾದ ಬಳಕೆಯಿಂದಾಗಿ ಪ್ರಕೃತಿಯ ಮೇಲೆ ಸಾಕಷ್ಟು ಪರಿಣಾಮಬೀರಿ ಜಾಗತಿಕ ತಾಪಮಾನ ಏರಿಕೆ ಸೇರಿದಂತೆ ಅನೇಕ ಸಮಸ್ಯೆ ತಂದೊಡ್ಡಿದೆ ಎಂದು ಪಟ್ಟಣದ ಶಾರದಾ ಪಿಯು ಕಾಲೇಜು ಆಡಳಿತಾಧಿಕಾರಿ ಪ್ರೊ. ಹನುಮಂತ ಭಜಂತ್ರಿ ಹೇಳಿದರು.

ಪಟ್ಟಣದ ಡಾ. ರಾಧಾಕೃಷ್ಣನ್ ಶಿಕ್ಷಕ ನಗರದ ಪ್ರಗತಿ ಕಾಲನಿಯಲ್ಲಿ ಗಾರ್ಡನ್ ಹಾಗೂ ರಸ್ತೆಯ ಪಕ್ಕದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರ ಉಳಿವಿಗಾಗಿ ಗಿಡಮರಗಳನ್ನು ಬೆಳೆಸುವ ಅವಶ್ಯಕತೆ ಇದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಬಾದಾಮಿ ವಲಯ ಅರಣ್ಯಾಧಿಕಾರಿ ಸಿದ್ದು ಪೂಜಾರ, ವಲಯ ಅರಣ್ಯ ಉಪವಿಭಾಗಾಧಿಕಾರಿ ಮಂಜುನಾಥ ಜಗದಾಳ, ಪ್ರೊ. ಅನಿಲ ಮಾನ್ವಿ, ವಿಶ್ರಾಂತ ಪ್ರೊ. ವೀರಭದ್ರಪ್ಪ ಬೆನಕನಾಳ, ಮಂಜುನಾಥ ಇಜೇರಿ, ಸಂಗಮೇಶ ಕಡಿ, ಪ್ರದೀಪ ಕಂಚಾಣಿ, ಶಿವಾನಂದ ಬಡಿಗೇರ, ಕಿರಣಕುಮಾರ ಭಾಪ್ರಿ ಇದ್ದರು.

Share This Article

ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್

ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…