ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಂದ ನೋಟಿಸ್ ಜಾರಿಯಾಗಿದೆ.
ವಸತಿ ಯೋಜನೆಯಡಿ ಫಲಾನುಭಾವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಪಾಕ್ ವಿಮಾನ ಪತನದ ಭೀಕರ ದೃಶ್ಯ…!
ಭಾಲ್ಕಿಯಲ್ಲಿ 91 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಆರೋಪವಿದೆ. 9 ಸಾವಿರಕ್ಕೂ ಹೆಚ್ಚು ಮನೆಗಳು ಬೋಗಸ್ ಫಲಾನುಭಾವಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ಖುದ್ದು ರಾಜೀವ್ ಗಾಂಧಿ ವಸತಿ ನಿಗಮದ ಎಂ.ಡಿ ನೇತೃತ್ವದಲ್ಲಿ ನಡೆದ ತನಿಖೆಯಿಂದ ಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಖಂಡ್ರೆಗೆ ನೋಟಿಸ್ ಜಾರಿಯಾಗಿದೆ.
2015-16 ರಿಂದ 2018-19 ರವರೆಗೆ ಅನುಷ್ಠಾನಗೊಂಡ ಮನೆಗಳ ಆಯ್ಕೆಯಲ್ಲಿ ಭಾರಿ ಅಕ್ರಮ ಪತ್ತೆ ಹಚ್ಚಿದ ರಾಜೀವ ಗಾಂಧಿ ವಸತಿ ನಿಗಮದ ತಂಡ ತನಿಖೆ ನಡೆಸುವ ಮೂಲಕ ಅಕ್ರಮ ಬಯಲು ಮಾಡಿದ್ದಾರೆ.
ಇದನ್ನೂ ಓದಿ: 36 ತಾಸು ಕರೊನಾ ಕರ್ಫ್ಯೂ: ಇಂದು ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಬಂದ್
ಖುದ್ದು ಶಾಸಕರ ಆಪ್ತ ಸಾಹಯಕರಾದ ಬಸವರಾಜ ಹಾಗೂ ಉಮೇಶ ಇಬ್ಬರು ಅವರ ಖಾಸಗಿ ಮೊಬೈಲ್ ಬಳಸಿ ಜತೆಗೆ ಶಾಸಕರ ಮನೆಯಿಂದ ಖಾಸಗಿ ಕಂಪ್ಯೂಟರ್ಗಳನ್ನು ಬಳಕೆ ಮಾಡಿಕೊಂಡು ಜನರಿಗೆ ಮನೆ ಮಂಜೂರಾತಿ ಆದೇಶ ಪತ್ರವನ್ನು ನೀಡುವ ಮೂಲಕ ಭಾರಿ ಅಕ್ರಮ ಎಸಗಿರುವ ಬಗ್ಗೆ ತನಿಖೆಯಿಂದ ಬಯಲಾದ ಹಿನ್ನಲೆಯಲ್ಲಿ ಡಿ.ಸಿ ಹಾಗೂ ಸಿಇಓ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್)
Photo Gallery| ಬರ್ತಡೇ ಖುಷಿಯಲ್ಲಿ ಸಂಯುಕ್ತಾ: ಸ್ಯಾಂಡಲ್ವುಡ್ ಬೆಡಗಿಯ ಮುದ್ದಾದ ಚಿತ್ರಗಳು