More

    ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​​ ಜನತೆಗೆ ಮೋಸ ಮಾಡುತ್ತಿದೆ: ಕೆ.ಎಸ್. ಈಶ್ವರಪ್ಪ

    ಕಲಬುರಗಿ: ಆರ್​ಎಸ್​ಎಸ್​ ನಿಷೇಧಿಸುವುದಾಗಿ ಹೇಳುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಇನ್ನು ಬಚ್ಚಾ ಅವನೇನು ಮಾಡಲು ಸಾದ್ಯ ಎಂದು ಬಿಜೆಪಿಯ ಹಿರಿಯ ನಾಯಕ ಕೆ.ಎಸ್​.ಈಶ್ವರಪ್ಪ ಹರಿಹಾಯ್ದಿದ್ದಾರೆ.

    ಈ ಕುರಿತು ಮಾತನಾಡಿದ ಈಶ್ವರಪ್ಪ ಆರ್​ಎಸ್​ಎಸ್​ ನಿಷೇಧಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅದರ ಹೊರತಾಗಿಯೂ ಪ್ರಿಯಾಂಕ ಖರ್ಗೆ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಿಲ್ಲ ಎಂದು ಆಕ್ಷೇಪಿಸಿದ್ದಾರೆ.

    ಇನ್ನು ಬಚ್ಚಾ ಅವನೇನು ಮಾಡಲು ಸಾದ್ಯ

    ಆರ್​ಎಸ್​ಎಸ್​ ದೇಶಭಕ್ತರ ಸಂಘಟನೆಯಾಗಿದ್ದು ದೇಶದ್ರೋಹಿಗಳಿಗೆ ಸಿಂಹಸ್ವಪ್ನವಾಗಿದೆ. ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ ಮತ್ತು ದೇಶಾದ್ಯಂತ ಕೋಟ್ಯಂತರ ಕಾರ್ಯಕರ್ತರನ್ನು ಹೊಂದಿದೆ. ಇದರ ಹೊರತಾಗಿಯೂ ನಿಷೇಧಿಸುವುದಾಗಿ ಹೇಳುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಇನ್ನು ಬಚ್ಚಾ ಅವನೇನು ಮಾಡಲು ಸಾದ್ಯ ಎಂದು ಕಿಡಿಕಾರಿದ್ದಾರೆ.

    ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​​ ಜನತೆಗೆ ಮೋಸ ಮಾಡುತ್ತಿದೆ: ಕೆ.ಎಸ್. ಈಶ್ವರಪ್ಪ

    ಇನ್ನು ಗ್ಯಾರಂಟಿಗಳ ಅನುಷ್ಠಾನದ ಕುರಿತು ಪ್ರತಿಕ್ರಿಯಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ ಐದು ಭರವಸೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್​​ ನಾಯಕರು ಹೇಳಿದ್ದರು. ಇದೀಗ ಎರಡು ಕ್ಯಾಬಿನೆಟ್​ ಸಭೆಗಳು ನಡೆದಿದ್ದರೂ ಇದುವರೆಗೂ ಗ್ಯಾರಂಟಿಗಳಿಗೆ ಅನುಮೋದನೆ ಸಿಕ್ಕಿಲ್ಲ.

    ಇದನ್ನೂ ಓದಿ: ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್​ ಶಾಸಕ ಟಿಎಂಸಿಗೆ ಸೇರ್ಪಡೆ

    ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ

    ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ, ನಂತರ ಈ ವರ್ಷ ಪಾಸಾದವರಿಗೆ ಮಾತ್ರ ಎಂದು ಹೇಳುವ ಮೂಲಕ ದ್ರೋಹ ಬಗೆದಿದೆ. ಗ್ಯಾರಂಟಿಗಳನ್ನು ನೋಡಿ ಕಾಂಗ್ರೆಸ್​ಗೆ ಜನ ಮತ ಹಾಕಿದ್ದಾರೆ ಹೀಗಾಗಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿಗದ್ದಾರೆ.

    ನಾವು ಸುಖಾಸುಮ್ಮನೆ ಎಲ್ಲರನ್ನೂ ಟೀಕಿಸುವುದಿಲ್ಲ ಒಂದು ತಿಂಗಳೂ ಕಾಯ್ದು ನೋಡುತ್ತೇವೆ ಆಗಲೂ ಜಾರಿಯಾಗಲಿಲ್ಲ ಎಂದರೆ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ಕಲಬುರ್ಗಿಯಲ್ಲಿ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts