More

    ನಾಳೆಯಿಂದ ಈಶ್ವರಪ್ಪ ಮತ ಭೇಟೆ

    ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಲೋಕಸಭೆ ಚುನಾವಣೆ ಸ್ಪರ್ಧೆಗೆ ಸಿದ್ಧತೆ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯ, ಮಠಾಧೀಶರನ್ನು ಸಂಪರ್ಕಿಸಿರುವ ಅವರು, ಶುಕ್ರವಾರ ಹೊಸನಗರ ರಾಮಚಂದ್ರಾಪುರ ಮಠಕ್ಕೆ ತೆರಳಿ ಶ್ರೀ ರಾಘವೇಶ್ವರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

    ಇನ್ನೊಂದೆಡೆ ಈಶ್ವರಪ್ಪ ಅವರ ನಿವಾಸಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಆಪ್ತರು, ಹಿತೈಷಿಗಳು ಆಗಮಿಸಿ ಬೆಂಬಲ ಸೂಚಿಸುತ್ತಿದ್ದರೆ. ಶಿವಮೊಗ್ಗ ಸುದತ್ತ ಕುಮಾರ ಎಂಬುವವರು ಈಶ್ವರಪ್ಪ ಅವರನ್ನು ಭೇಟಿಯಾಗಿ ಚುನಾವಣೆ ವೆಚ್ಚಕ್ಕೆಂದು ದೇಣಿಗೆ ರೂಪದಲ್ಲಿ ಹಣವನ್ನು ನೀಡಿದರು.
    ಈ ನಡುವೆ ಮಾ.23ರಿಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಬೆಳಗ್ಗೆ 8ಕ್ಕೆ ಪುರಲೆಯ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರಚಾರ ನಡೆಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts