More

    ಪರೀಕ್ಷೆ ಬಗ್ಗೆ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಅನಗತ್ಯ ಆತಂಕ ಬೇಡ: ಸರ್ಕಾರದ ಅಭಯ

    ಬೆಂಗಳೂರು: ಲಾಕ್ ಡೌನ್‌ ಅವಧಿ ಮುಗಿದ ಬಳಿಕ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳ ಹಿತ ಕಾಯುವ ತೀರ್ಮಾನವನ್ನು ನಾನೇ ಖುದ್ದಾಗಿ ಪ್ರಕಟಿಸುತ್ತೇನೆ. ಪೋಷಕರು, ವಿದ್ಯಾರ್ಥಿಗಳು‌ ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಪ್ರಧಾನಿ‌ ನರೇಂದ್ರ ಮೋದಿಯವರು ಕರೊನಾ ಲಾಕ್ ಡೌನ್ ಅವಧಿಯನ್ನು ಮೇ ಮೂರರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ, ಎಸ್.ಎಸ್.ಎಲ್.ಸಿ ಪರೀಕ್ಷಾ ಅವಧಿಯನ್ನು ಸದ್ಯಕ್ಕೆ‌ ಪ್ರಕಟಿಸಲಾಗುವುದಿಲ್ಲ. ಜನ ಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆಗಳ ದಿನಾಂಕವನ್ನು ಈಗಾಗಲೇ ತಿಳಿಸಿರುವಂತೆ ಖುದ್ದಾಗಿ ಪ್ರಕಟಿಸುವೆ. ಪೋಷಕರು, ವಿದ್ಯಾರ್ಥಿಗಳು ಅನವಶ್ಯಕ ಗೊಂದಲಕ್ಕೆ ಒಳಗಾಗ ಬೇಡಿ ಎಂದು ಮನವಿ‌ ಮಾಡಿದ್ದಾರೆ.

    ಅಲ್ಲದೇ ಕೆಲವು ಮಾಧ್ಯಮಗಳು, ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸಲಾಗಿದೆಯೆಂದು ವರದಿ ಮಾಡಿದ್ದು, ಸಾರ್ವಜನಿಕ‌ ಶಿಕ್ಷಣ‌ ಇಲಾಖೆ‌ ಇಂತಹ ಯಾವುದೇ ಕ್ರಮವನ್ನು ಆರಂಭಿಸಿಲ್ಲವೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಪೋಷಕರು, ವಿದ್ಯಾರ್ಥಿಗಳು ಇಂತಹ ಮಾಹಿತಿಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಮನವಿ ಮಾಡಿದ್ದಾರೆ.

    ಕರೊನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆ: ಒಟ್ಟು 260 ಮಂದಿಗೆ ಸೋಂಕು- 71 ಮಂದಿ ಬಿಡುಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts