ಇಂದಿರಾಗಾಂಧಿ ಸ್ವರ್ಗದಿಂದ ಮರಳಿ ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ: Amit Shah

blank

ಮಹಾರಾಷ್ಟ್ರ: ಇಂದಿರಾಗಾಂಧಿ ಸ್ವರ್ಗದಿಂದ ಮರಳಿ ಬಂದರೂ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ(Amit Shah) ಹೇಳಿದರು.

blank

ಮಹಾರಾಷ್ಟ್ರದ ಚುನಾವಣಾ ಪ್ರಚಾರದ ಸಭೆಯಲ್ಲಿ ಬುಧವಾರ(ನ.13) ಮಾತನಾಡಿದ ಶಾ, ”ಸೋನಿಯಾ-ಮನಮೋಹನ್​ ಸಿಂಗ್​ 10 ವರ್ಷದ ಆಡಳಿತದ ಅವಧಿಯಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಬಾಂಬ್​ಗಳನ್ನು ಸ್ಫೋಟ ಮಾಡುತ್ತಿದ್ದರು” ಎಂದರು.

ಶ್ರೀನಗರದ ಲಾಲ್​​ಚೌಕ್​ಗೆ ಹೋಗಲು ಭಯವಾಗುತ್ತಿದೆ ಎಂಬ ಕೇಂದ್ರ ಮಾಜಿ ಸಚಿವ ಸುಶೀಲ್​ ಕುಮಾರ್​ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾ, ನಿಮ್ಮ ಮೊಮ್ಮಕ್ಕಳೊಂದಿಗೆ ಯಾವುದೇ ಭಯ ಇಲ್ಲದೆ ಈಗ ಕಾಶ್ಮೀರಕ್ಕೆ ತೆರಳಿ, ಯಾವುದೇ ಹಾನಿ ಆಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದರು.

ಇದನ್ನೂ ಓದಿ:ಸುಟ್ಟಿದ್ದು ನಮ್ಮನೆ, ಜೀವ ಹೋಗಿದ್ದು ನಮ್ಮವರದ್ದು; UP CM ಯೋಗಿ ಹೇಳಿಕೆಗೆ ಸಚಿವ Priyank Kharge ತಿರುಗೇಟು

ಈ ಹಿಂದೆ ಮಹಾರಾಷ್ಟ್ರದ ಮತ್ತೊಂದು ಪ್ರಚಾರ ಸಭೆಯಲ್ಲಿ ಶಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು. “ರಾಹುಲ್ ಗಾಂಧಿಯವರ ನಾಲ್ಕನೇ ತಲೆಮಾರಿನವರು ಸಹ ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರು ಸ್ಥಾಪಿಸಲು ಸಾಧ್ಯವಾಗಲ್ಲ” ಎಂದು ಹೇಳಿದ್ದರು.

blank

ಕಾಶ್ಮೀರದ ವಿಧಾನಸಭೆಯಲ್ಲಿ 370 ನೇ ವಿಧಿಯನ್ನು ಮರುಸ್ಥಾಪಿಸಲು ಅಂಗೀಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಶ್ಮೀರದಲ್ಲಿ 370 ಅನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರು ದೇಶದ ಭದ್ರತೆಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ಶಾ ಹೇಳಿದರು, (ಏಜೆನ್ಸೀಸ್​).

ED, CBI, ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ: CM Siddaramaiah ಗುಡುಗು

Share This Article

ಪುಷ್ಯ ನಕ್ಷತ್ರಕ್ಕೆ ಸೂರ್ಯನ ಎಂಟ್ರಿ! ಈ ತಿಂಗಳು 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Astrology

Astrology : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಜನಿಸಿದ ರಾಶಿಚಕ್ರ ಚಿಹ್ನೆ ಮತ್ತು ನಕ್ಷತ್ರವು ಅವರ…

ಮುಖದ ಸೌಂದರ್ಯಕ್ಕೆ ಐಸ್​​ಕ್ಯೂಬ್.. ಕೂಲ್.. ಕೂಲ್! ಐಸ್‌ಕ್ಯೂಬ್‌ನಿಂದ ಸೌಂದರ್ಯದ ಆರೈಕೆ.. Ice Facial Benefits

Ice Facial Benefits:  ಮಹಿಳಯರು ಸೌಂದರ್ಯಪ್ರಿಯರು. ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು  ಮಾರುಕಟ್ಟೆಯಲ್ಲಿ…

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…